ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಲಂಚ ಮಂಚದ ಸರ್ಕಾರ' ಎಂದಿದ್ದಕ್ಕೆ ಬಿಜೆಪಿಯವರಿಗೆ ಉರಿ: ಪ್ರಿಯಾಂಕ್‌ ಖರ್ಗೆ

Last Updated 12 ಆಗಸ್ಟ್ 2022, 10:31 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಬೇಕು ಎಂದರೆ ಯುವತಿಯರು ಮಂಚ ಹತ್ತಬೇಕಾಗಿದೆ’ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆ ನೀಡಿದ್ದಾರೆ. ಇದಕ್ಕೆ ಆಡಳಿತ ಪಕ್ಷದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಮುಖಂಡರು ಆಕ್ರೋಶಕ್ಕೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಪ್ರಿಯಾಂಕ್‌ ಖರ್ಗೆ, ನಾನು 'ಲಂಚ ಮಂಚದ ಸರ್ಕಾರ' ಎಂದಿದ್ದಕ್ಕೆ ಬಿಜೆಪಿಯವರಿಗೆ ಉರಿ ಬಿದ್ದಿದೆ. ಸತ್ಯ ಆ ಮಟ್ಟಿಗೆ ಕಹಿಯಾಗಿರುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಬಿಜೆಪಿಯಲ್ಲಿ ಲಂಚ, ಮಂಚದ ಪುರಾಣವಿರದಿದ್ದರೆ ಇಬ್ಬರು ಸಚಿವರು ರಾಜೀನಾಮೆ ನೀಡಿದ್ದೇಕೆ’ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಸಂಸದರು, ಮಂತ್ರಿಗಳು, ಶಾಸಕರು ಕೋರ್ಟ್‌ನಲ್ಲಿ ಸಾಲು ಸಾಲು ತಡೆಯಾಜ್ಞೆ ತಂದಿದ್ದೇಕೆ ಎಂದೂ ಖರ್ಗೆ ಪ್ರಶ್ನಿಸಿದ್ದಾರೆ.

ಕಲಬುರಗಿಯಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಖರ್ಗೆ, ‘ಸರ್ಕಾರ ಹುದ್ದೆಗಳನ್ನು ಮಾರಾಟ ಮಾಡಲು ನಿಂತಿದೆ. ಯುವತಿಯರಿಗೆ ಉದ್ಯೋಗ ಬೇಕಾದರೆ ಮಂಚ ಹತ್ತಬೇಕು. ಯುವಕರಿಗೆ ಉದ್ಯೋಗ ಬೇಕಾದರೆ ಲಂಚ ಕೊಡಬೇಕು ಎನ್ನುವಂತಾಗಿದ್ದು ಇದೊಂದು‌ ಲಂಚ–ಮಂಚದ ಸರ್ಕಾರವಾಗಿದೆ. ಯುವತಿಯ ಕೆಲಸ ಮಾಡಿಸಿಕೊಡಲು ಮಂಚ ಹತ್ತಲು ಸಚಿವರೊಬ್ಬರು ಹೇಳಿದ್ದರು. ಹಗರಣ ಬೆಳಕಿಗೆ ಬಂದ ಬಳಿಕ ಅವರು ರಾಜೀನಾಮೆ ನೀಡಿದ್ದೇ ನನ್ನ ಮಾತಿಗೆ ಸಾಕ್ಷಿಯಾಗಿದೆ’ ಎಂದರು.

‘ಕೆಪಿಟಿಸಿಎಲ್‌ನ ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್, ಸಿವಿಲ್ ಎಂಜಿನಿಯರ್ ಸೇರಿದಂತೆ ಒಟ್ಟು 1492 ಹುದ್ದೆಗಳಿಗೆ ನೇಮಕಾತಿ ನಡೆಸಿದೆ. ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯುತ್ತಿದ್ದ ಅಭ್ಯರ್ಥಿ ಗೋಕಾಕನಲ್ಲಿ ಬಂಧನಕ್ಕೊಳಗಾಗಿದ್ದಾನೆ. ನನಗಿರುವ ಮಾಹಿತಿಯ ಪ್ರಕಾರ ಒಟ್ಟು 600 ಹುದ್ದೆಗಳಿಗೆ ಡೀಲ್‌ ನಡೆದಿರುವ ಸಾಧ್ಯತೆ ಇದೆ. ಎಇ ಹುದ್ದೆಗೆ ₹ 50 ಲಕ್ಷ, ಜೆಇ ಹುದ್ದೆಗೆ ₹ 30 ಲಕ್ಷದವರೆಗೆ ಹಣ ಪಡೆದಿರುವ ಶಂಕೆ ಇದೆ. ಇದೊಂದರಲ್ಲೇ ₹ 300 ಕೋಟಿ ಅವ್ಯವಹಾರ ನಡೆದಿರುವ ಸಾಧ್ಯತೆ ಇದ್ದು, ಕೂಡಲೇ ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು. ಇಲ್ಲವೇ ಎಸ್‌ಐಟಿ ರಚಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT