ಗೋರಿಪಾಳ್ಯದಲ್ಲಿ ನಡೆದ ಕೊಲೆ ವಿಚಾರವಾಗಿ ಮಾತನಾಡಿದ್ದ ಆರಗ ಜ್ಞಾನೇಂದ್ರ ಅವರು, 'ಚಂದ್ರು ದಲಿತ ಸಮುದಾಯಕ್ಕೆ ಸೇರಿದ ಯುವಕ. ಸೋಮವಾರ ತಡರಾತ್ರಿ ಆತನನ್ನು ಅಡ್ಡಗಟ್ಟಿದ್ದ ಗುಂಪೊಂದು ಉರ್ದು ಮಾತಾಡುವಂತೆ ಒತ್ತಾಯಿಸಿತ್ತು. ಆತನಿಗೆ ಉರ್ದು ಬರುತ್ತಿರಲಿಲ್ಲ. ಹೀಗಾಗಿ ಚೂರಿಯಿಂದ ಚುಚ್ಚಿ ಅಮಾನುಷವಾಗಿ ಕೊಲೆ ಮಾಡಿದ್ದಾರೆ' ಎಂದು ಹೇಳಿದ್ದರು. ಈ ಹೇಳಿಕೆಯು ಚರ್ಚೆಗೆ ಗ್ರಾಸವಾಗುತ್ತಿದ್ದಂತೆ, ‘ಚಂದ್ರುವಿನ ಕೊಲೆಯು ದ್ವಿಚಕ್ರ ವಾಹನ ಅಪಘಾತದ ವಿಚಾರವಾಗಿ ನಡೆದಿದ್ದು’ ಎಂದು ಆರಗ ಸ್ಪಷ್ಟನೆ ನೀಡಿದ್ದರು.