ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೋಹತ್ಯೆ ನಿಷೇಧದ ಪರಿಣಾಮವಾಗಿ ಜಾನುವಾರುಗಳಿಗೆ ಮೇವು ಪೂರೈಕೆ, ಗೋಶಾಲೆಗಳ ನಿರ್ಮಾಣ ಮತ್ತು ನಿರ್ವಹಣೆ, ಪರ್ಯಾಯವಾಗಿ ಕುರಿ, ಮೇಕೆ ಮಾಂಸ ಪೂರೈಕೆಗೆ ಸಹಾಯಧನ ಸೇರಿದಂತೆ ನಾಲ್ಕು ವರ್ಷಗಳಲ್ಲಿ ₹ 5,280 ಕೋಟಿ ಹೊರೆ ಬೀಳಲಿದೆ ಎಂದು ಆರ್ಥಿಕ ಇಲಾಖೆ ತಿಳಿಸಿತ್ತು. ಮಸೂದೆಯನ್ನು ಒಪ್ಪುವುದು ಸೂಕ್ತವಲ್ಲ ಎಂಬ ತೀರ್ಮಾನವನ್ನೂ ಅಭಿಪ್ರಾಯವನ್ನೂ ನೀಡಿತ್ತು. ಮುಖ್ಯಮಂತ್ರಿ ಹಾಗೂ ಪಶುಸಂಗೋಪನಾ ಸಚಿವರು ಆರ್ಥಿಕ ಇಲಾಖೆಯ ಅಭಿಪ್ರಾಯವನ್ನು ನಿರ್ಲಕ್ಷಿಸಿ ತೀರ್ಮಾನ ಕೈಗೊಂಡಿದ್ದರು’ ಎಂದರು.