‘ಸಣ್ಣಪುಟ್ಟ ಆರೋಪಿಗಳನ್ನು ಹಿಡಿದು ಜಂಬ ಕೊಚ್ಚಿಕೊಳ್ಳಬೇಡಿ. ಪಿಎಸ್ಐ ಹುದ್ದೆ ಕೊಡಿಸಲು ಸಂಗ್ರಹಿಸಲಾದ ಹಣ ಎಲ್ಲೆಲ್ಲಿ ಹೋಗಿದೆ? ಯಾರಿಗೆಲ್ಲಾ ಹಂಚಿಕೆಯಾಗಿದೆ ಎಂದು ಪತ್ತೆ ಹಚ್ಚಿ, ವಶ ಪಡಿಸಿಕೊಳ್ಳಲು ಶುರು ಮಾಡಿಸಿ ಸಾಕು. ನಿಮ್ಮ ಸರ್ಕಾರ ತನ್ನಷ್ಟಕ್ಕೆ ತಾನೇ ಪತನಗೊಳ್ಳುತ್ತದೆ ಎಂಬ ಮಾತುಗಳಿವೆ. ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ದಿವ್ಯಾ ಹಾಗರಗಿ ಅವರ ಕಾರು, ಆಕೆ ತಲೆ ಮರೆಸಿಕೊಂಡ ಕಾಲಾವಧಿಯಲ್ಲಿ ಯಾರ ಊರಿನಲ್ಲಿ ನಿಂತಿತ್ತು ಎಂಬ ವದಂತಿಗಳು ಸಾರ್ವಜನಿಕವಾಗಿ ಹರಿದಾಡುತ್ತಿವೆ. ಜೆ.ಜೆ.ನಗರ ಕೊಲೆ ಪ್ರಕರಣದಲ್ಲಿ ವದಂತಿಗಳನ್ನೇ ನಂಬಿ ಹೇಳಿಕೆ ನೀಡಿ, ಕೆಲವೇ ಗಂಟೆಗಳಲ್ಲಿ ಕ್ಷಮೆಯಾಚಿಸಿದ ನಿಮಗೆ, ಪಿಎಸ್ಐ ಹಗರಣದಲ್ಲಿನ ವದಂತಿಗಳ ಬಗ್ಗೆ ಮಾಹಿತಿ ಇರುವುದಿಲ್ಲವೇ’ ಎಂದು ಪ್ರಶ್ನಿಸಿದ್ದಾರೆ.