ಮತಾಂತರ ನಿಷೇಧ ಮಸೂದೆ ಅಸಂವಿಧಾನಿಕ. ಸಂವಿಧಾನ ಪರಿಚ್ಛೇದ 25ರಿಂದ 28ರವರೆಗಿನ ಧರ್ಮದ ಆಚರಣೆ ಮತ್ತು ಪ್ರಚಾರದ ಹಕ್ಕಿಗೆ ವಿರುದ್ಧವಾಗಿದೆ. ‘ಈಚಿನ ವರ್ಷಗಳಲ್ಲಿ ರಾಜ್ಯದಲ್ಲಿ ಆಮಿಷ, ಒತ್ತಾಯ, ವಂಚನೆಗಳ ಮೂಲಕ ಮತಾಂತರಗಳು ಹೆಚ್ಚಾಗಿವೆ. ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಮಾಡಿವೆ. ಇಂತಹ ಮತಾಂತರ ತಡೆಗಟ್ಟಲು, ಮತಾಂತರಿಗಳನ್ನು ಶಿಕ್ಷಿಸಲು ರಾಜ್ಯದಲ್ಲಿ ಯಾವ ಶಾಸನವೂ ಇಲ್ಲ. ಹಾಗಾಗಿ, ಹೊಸ ಕಾಯ್ದೆ ರೂಪಿಸಲಾಗುತ್ತಿದೆ’ ಎಂದು ಮಸೂದೆಯ ಉದ್ದೇಶದಲ್ಲಿ ವಿವರಿಸಿದ್ದಾರೆ. ಆದರೆ, ಬಲವಂತದ ಮತಾಂತರ ಪ್ರಕರಣದ ಸಂಖ್ಯೆಯನ್ನೇ ನಮೂದಿಸಿಲ್ಲ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.