ಸಿಐಡಿ ಡಿಜಿಪಿಗೆ ಏಳು ಪುಟಗಳ ಪತ್ರ ಬರೆದಿರುವ ಪ್ರಿಯಾಂಕ್, ‘ತನಿಖಾಧಿಕಾರಿಗಳು ಅವರ ರಾಜಕೀಯ ‘ಬಾಸ್’ಗಳ ಪ್ರಭಾವಕ್ಕೆ ಮಣಿದು ನೋಟಿಸ್ ನೀಡಿದ್ದಾರೆ. ಸರ್ಕಾರದ ವಿರುದ್ಧ ಪತ್ರಿಕಾಗೋಷ್ಠಿ ನಡೆಸದಂತೆ ತಡೆಯಲು ಹೀಗೆ ಮಾಡಿದ್ದಾರೆ’ ಎಂದು ದೂರಿದ್ದಾರೆ. ‘ಆಡಿಯೊ ತುಣುಕಿನ ಸತ್ಯಾಸತ್ಯತೆ ಬಗ್ಗೆ ನೋಟಿಸ್ನಲ್ಲಿ ಸಿಐಡಿ ಅಧಿಕಾರಿಗಳು ಪ್ರಶ್ನಿಸಿದ್ದಾರೆ. ನಾನು ಹೇಳಿದ್ದನ್ನು ನಂಬುವುದಾದರೆ ಪ್ರಕರಣದಲ್ಲಿ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನೂ ಬಂಧಿಸಬೇಕಲ್ಲವೆ’ ಎಂದು ಪ್ರಶ್ನಿಸಿದರು.