ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಬಹುತೇಕ ಸಂಘಟನೆಗಳು ನೈತಿಕ ಬೆಂಬಲ ಘೋಷಿಸಿವೆ. ರಾಜ್ಯದ ಯಾವ್ಯಾವ ಭಾಗದಲ್ಲಿ ಬಂದ್ಗೆ ಯಾವ ರೀತಿಯ ಬೆಂಬಲ ವ್ಯಕ್ತವಾಗುತ್ತಿದೆ? ಎಲ್ಲೆಲ್ಲಿ ಪರಿಸ್ಥಿತಿ ಹೇಗಿದೆ ಎಂಬ ಕ್ಷಣಕ್ಷಣದ ಅಪ್ಡೇಟ್ಸ್ ಇಲ್ಲಿ ಲಭ್ಯ
Close

ವಿ.ಕೆ.ಶಶಿಕಲಾಗೆ ಕೋವಿಡ್ ಸೋಂಕು ದೃಢ ರಾಮಮಂದಿರ ನಿರ್ಮಾಣಕ್ಕೆ ₹1 ಕೋಟಿ ದೇಣಿಗೆ ನೀಡಿದ ಗೌತಮ್ ಗಂಭೀರ್ ಟಿ ನಟರಾಜನ್ಗೆ ಹುಟ್ಟೂರಿನಲ್ಲಿ ಅದ್ಧೂರಿ ಸ್ವಾಗತ: ಮೆರವಣಿಗೆ ಮಾಡಿ ಸಂಭ್ರಮ ಜನಾಂಗೀಯ ನಿಂದನೆ ಆದಾಗ ಅಂಪೈರ್ಗಳು ಪಂದ್ಯ ಬಿಡುವ ಆಯ್ಕೆ ಕೊಟ್ಟಿದ್ದರು: ಸಿರಾಜ್ 20 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ಹೊಂದಿದ ಭಾರತದ ಮೊದಲ ರಾಜ್ಯ ಮಹಾರಾಷ್ಟ್ರ ಕೃಷಿ ಕಾಯ್ದೆಗಳನ್ನು 18 ತಿಂಗಳು ಅಮಾನತಿನಲ್ಲಿಡುವ ಕೇಂದ್ರದ ಪ್ರಸ್ತಾವ ತಿರಸ್ಕಾರ Covid-19 Karnataka Update: ಒಂದೇ ದಿನ 815 ಮಂದಿ ಗುಣಮುಖ ರಾತ್ರಿ 1 ರಿಂದ 3ರ ವರೆಗೆ ಯುಪಿಐ ಬಳಸಬೇಡಿ: ರಾಷ್ಟ್ರೀಯ ಪಾವತಿ ನಿಗಮ ರೈತರ ಪ್ರತಿಭಟನೆಯಿಂದ ₹50,000 ಕೋಟಿ ನಷ್ಟ ಪುಣೆಯ ಸೀರಂ ಇನ್ಸ್ಟಿಟ್ಯೂಟ್ನಲ್ಲಿ ಬೆಂಕಿ ದುರಂತ: ಪ್ರಧಾನಿ ಮೋದಿ ಸಂತಾಪ ಸೆಗಣಿಯನ್ನು ಕೇಕ್ ಎಂದು ತಿಂದ; ವೈರಲ್ ಆಯ್ತು ಅಮೆಜಾನ್ ಬಳಕೆದಾರನ ಕಾಮೆಂಟ್! ಕೋವಿಶೀಲ್ಡ್ ತಯಾರಕ ಸಂಸ್ಥೆ ಸೀರಂ ಇನ್ಸ್ಟಿಟ್ಯೂಟ್ನ ಅಗ್ನಿ ಅವಘಡದಲ್ಲಿ 5 ಸಾವು ಕನ್ನಡ ಧ್ಜಜ ವಿರೋಧಿ ಹೋರಾಟ| ಪ್ರತಿಭಟನೆಗೆ ಅವಕಾಶ ಸಿಗದೆ ಮುಖಭಂಗಕ್ಕೀಡಾದ ಎಂಇಎಸ್ ಸಚಿವರ ಖಾತೆ ಹಂಚಿಕೆಯಲ್ಲಿ ಹಸ್ತಕ್ಷೇಪ ಇಲ್ಲ: ವಿಜಯೇಂದ್ರ ಮತಕ್ಕಾಗಿ ಬಿಎಸ್ಎಫ್ ಮೂಲಕ ಗಡಿ ಗ್ರಾಮಗಳ ಮೇಲೆ ಬಿಜೆಪಿ ಒತ್ತಡ: ಟಿಎಂಸಿ ಆರೋಪ ವಿಮಾನ ನಿಲ್ದಾಣದಿಂದ ನೇರವಾಗಿ ತಂದೆಯ ಸಮಾಧಿ ಸ್ಥಳಕ್ಕೆ ತೆರಳಿದ ಮೊಹಮ್ಮದ್ ಸಿರಾಜ್ ದೆಹಲಿಯಲ್ಲಿ ಟ್ರ್ಯಾಕ್ಟರ್ ರ್ಯಾಲಿ: ರೈತ ಮುಖಂಡರು, ಪೊಲೀಸರ ನಡುವೆ ಮೂಡದ ಒಮ್ಮತ ಕೋವಿಶೀಲ್ಡ್ ಉತ್ಪಾದನಾ ಸಂಸ್ಥೆ ಪುಣೆಯ ಸೀರಂ ಇನ್ಸ್ಟಿಟ್ಯೂಟ್ನಲ್ಲಿ ಬೆಂಕಿ ಕೆಜಿಎಫ್ನ ರಾಕಿ ಬಾಯ್ ಆದ ಆಸ್ಟ್ರೇಲಿಯಾ ಕ್ರಿಕೆಟಿಗ ಡೇವಿಡ್ ವಾರ್ನರ್! 'ತಾಂಡವ್' ನಂತರ ವಿವಾದದ ಸುಳಿಯಲ್ಲಿ 'ಮಿರ್ಜಾಪುರ್': ಸುಪ್ರೀಂ ನೋಟಿಸ್
- ವಿ.ಕೆ.ಶಶಿಕಲಾಗೆ ಕೋವಿಡ್ ಸೋಂಕು ದೃಢ
- ರಾಮಮಂದಿರ ನಿರ್ಮಾಣಕ್ಕೆ ₹1 ಕೋಟಿ ದೇಣಿಗೆ ನೀಡಿದ ಗೌತಮ್ ಗಂಭೀರ್
- ಟಿ ನಟರಾಜನ್ಗೆ ಹುಟ್ಟೂರಿನಲ್ಲಿ ಅದ್ಧೂರಿ ಸ್ವಾಗತ: ಮೆರವಣಿಗೆ ಮಾಡಿ ಸಂಭ್ರಮ
- ಜನಾಂಗೀಯ ನಿಂದನೆ ಆದಾಗ ಅಂಪೈರ್ಗಳು ಪಂದ್ಯ ಬಿಡುವ ಆಯ್ಕೆ ಕೊಟ್ಟಿದ್ದರು: ಸಿರಾಜ್
- 20 ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣ ಹೊಂದಿದ ಭಾರತದ ಮೊದಲ ರಾಜ್ಯ ಮಹಾರಾಷ್ಟ್ರ
- ಕೃಷಿ ಕಾಯ್ದೆಗಳನ್ನು 18 ತಿಂಗಳು ಅಮಾನತಿನಲ್ಲಿಡುವ ಕೇಂದ್ರದ ಪ್ರಸ್ತಾವ ತಿರಸ್ಕಾರ
- Covid-19 Karnataka Update: ಒಂದೇ ದಿನ 815 ಮಂದಿ ಗುಣಮುಖ
- Home
- Karnataka News
- Pro kannada outfits karnataka bandh latest live news updates protest against setting up maratha development authority
ಚಿತ್ರದುರ್ಗ: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಶನಿವಾರ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಪ್ರತಿಭಟನೆಗೆ ಮಾತ್ರ ಸೀಮಿತವಾಯಿತು. ಜಿಲ್ಲೆಯ ಜನರು ಹೋರಾಟಕ್ಕೆ ಬೆಂಬಲ ನೀಡಲಿಲ್ಲ.
ವಿಜಯಪುರ: ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಹಾಗೂ ನಿಗಮವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಶನಿವಾರ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ವಿಜಯಪುರ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸಂಪೂರ್ಣ ವಿಫಲವಾಯಿತು.
ಮಂಡ್ಯ: ಮರಾಠ ಅಭಿವೃದ್ಧಿ ನಿಗಮ ರಚನೆ ಕೈಬಿಡಬೇಕು ಎಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಕೋಲಾರ: ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ನೀಡಿದ್ದ ‘ಕರ್ನಾಟಕ ಬಂದ್’ ಕರೆಗೆ ಜಿಲ್ಲೆಯಲ್ಲಿ ಶನಿವಾರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದರಿಂದ ಜನಜೀವನಕ್ಕೆ ಬಂದ್ನ ಬಿಸಿ ತಟ್ಟಲಿಲ್ಲ.
ಕಾರವಾರ: ಮರಾಠಾ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಬಂದ್ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿ ಜನಜೀವನ ಎಂದಿನಂತೆ ಸಾಗಿತು.
ಚಾಮರಾಜನಗರ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದನ್ನು ಖಂಡಿಸಿ ಕನ್ನಡ ಸಂಘಟನೆಗಳು ಶನಿವಾರ ಕರೆ ನೀಡಿದ್ದ ಬಂದ್ಗೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಜಿಲ್ಲೆಯ ವಿವಿಧ ಕನ್ನಡ ಸಂಘಟನೆಗಳು ಪ್ರತಿಭಟನೆ ನಡೆಸಿ, ಬಂದ್ಗೆ ಬೆಂಬಲ ವ್ಯಕ್ತಪಡಿಸಿದವು.
ರಾಮನಗರ: ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಶನಿವಾರ ಕನ್ನಡಪರ ಸಂಘಟನೆಗಳ ಒಕ್ಕೂಟವು ಕರೆ ನೀಡಿದ್ದ ಕರ್ನಾಟಕ ಬಂದ್ ಬೆಂಬಲಿಸಿ ವಿವಿಧ ಸಂಘಟನೆಗಳು ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿದವು.
ಉಡುಪಿಯಲ್ಲಿ ಬಂದ್ ನೀರಸ
ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ರಾಜ್ಯ ಬಂದ್ಗೆ ಉಡುಪಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಎಂದಿನಂತೆ ಇದೆ.
ಶಿವಮೊಗ್ಗದಲ್ಲಿ ಬಂದ್ಗೆ ನೀರಸ ಪ್ರತಿಕ್ರಿಯೆ
ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಶಿವಮೊಗ್ಗ ನಗರದಲ್ಲಿ ನೀರಿಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ರಾಮನಗರ: ಪರಿಣಾಮ ಬೀರದ ಬಂದ್
ಕನ್ನಡಪರ ಸಂಘಟನೆಗಳ ಒಕ್ಕೂಟವು ಕರೆ ನೀಡಿರುವ ಕರ್ನಾಟಕ ಬಂದ್ಗೆ ರಾಮನಗರ ಜಿಲ್ಲೆಯಲ್ಲಿ ಬೆಂಬಲ ದೊರೆತಿಲ್ಲ.
ಬಾಗಲಕೋಟೆಯಲ್ಲಿ ಬಂದ್ ವಿಫಲ
ಬಂದ್: ಬೆಳಗಾವಿಯಲ್ಲಿ ಕಾಣದ ಬೆಂಬಲ
ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ ಗೆ ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕಲಬುರ್ಗಿಯಲ್ಲಿ ಬಂದ್ ವಿಫಲ
ಕಲಬುರ್ಗಿ: ಮರಾಠಾ ಅಭಿವೃದ್ಧಿ ನಿಗಮ ಕೈಬಿಡುವಂತೆ ಆಗ್ರಹಿಸಿ ಶನಿವಾರ ಕರೆ ನೀಡಿದ ರಾಜ್ಯ ಬಂದ್ ಕಲಬುರ್ಗಿಯಲ್ಲಿ ಯಾವುದೇ ರೀತಿಯ ಪರಿಣಾಮ ಬೀರಲಿಲ್ಲ.
ಕಲಬುರ್ಗಿಯಲ್ಲಿ ಬಂದ್ ವಿಫಲ; ಪ್ರತಿಭಟನೆಗೂ ಸುಳಿಯದ ಕಾರ್ಯಕರ್ತರು
ಬೆಂಗಳೂರಿನಲ್ಲಿ ವ್ಯಾಪಾರ-ವಹಿವಾಟು ಎಂದಿನಂತೆ
ಮರಾಠ ಅಭಿವೃದ್ಧಿ ನಿಗಮ ರಚನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಬಂದ್ಗೆ ಬೆಂಗಳೂರು ನಗರದಲ್ಲಿ ಸದ್ಯ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಚಿತ್ರದುರ್ಗ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಚಿತ್ರದುರ್ಗ ನಗರದ ಗಾಂಧಿ ವೃತ್ತದಲ್ಲಿ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆಯ 15ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದರು.
ಎಂದಿನಂತೆ ಕೆಎಸ್ಆರ್ಟಿಸಿ ಬಸ್ ಸಂಚಾರ
ಕೆಎಸ್ಆರ್ಟಿಸಿ ಬಸ್ಗಳ ಕಾರ್ಯಾಚರಣೆ ಎಂದಿನಂತೆ ಸುಗಮವಾಗಿದೆ ಎಂದು ನಿಗಮ ಸ್ಪಷ್ಟಪಡಿಸಿದೆ. ಎಲ್ಲಾ 17 ವಿಭಾಗಗಳ ಪೈಕಿ ಯಾವುದೇ ವಿಭಾದಲ್ಲೂ ಬಸ್ ಕಾರ್ಯಾಚರಣೆ ಏರುಪೇರಾಗಿಲ್ಲ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಕೆಎಸ್ಆರ್ಟಿಸಿ ನಿಲ್ದಾಣದ ಬಳಿ ಜಮಾಯಿಸಿರುವ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು
ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಮೆಟ್ರೊ ರೈಲು ಸಂಚಾರ ಎಂದಿನಂತಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬಿಎಂಟಿಸಿ, ಮೆಟ್ರೊ ರೈಲು ಸಂಚಾರ ಎಂದಿನಂತಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ತೆಗೆದುಕೊಳ್ಳುವುದಾಗಿ ಸಾರಿಗೆ ಸಂಸ್ಥೆಗಳ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ
ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ಗೆ ಕ್ರಮ