ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಎಂ. ಕೀರ್ತನ್ ಕುಮಾರ್ ಮಾತನಾಡಿ, 'ದೆಹಲಿ ಮಾದರಿ ಆಡಳಿತ, ಒಳ್ಳೆಯ ಸಮಾಜ ನಿರ್ಮಿಸಲು ರಾಜ್ಯದಲ್ಲಿ ಈಗಾಗಲೇ ಮೊದಲನೇ ಪಟ್ಟಿಯಲ್ಲಿ 80 ಅಭ್ಯರ್ಥಿಗಳ ಘೋಷಣೆಯಾಗಿದೆ. ಅದರಲ್ಲಿ ಡಾಕ್ಟರ್, ಲಾಯರ್, ಶಿಕ್ಷಣ ತಜ್ಞರು, ಯುವಕರು ಇದ್ದಾರೆ. ಭ್ರಷ್ಟಾಚಾರವನ್ನು ತೊಲಗಿಸಲು ಈ ಬಾರಿ ಒಂದು ಅವಕಾಶ ಕಲ್ಪಿಸಿ' ಎಂದು ಮನವಿ ಮಾಡಿದರು.