<p><strong>ಕಲಬುರ್ಗಿ:</strong> ಡಾ.ಬಿ.ಆರ್.ಅಂಬೇಡ್ಕರ್ ಅವರ 64ನೇ ಮಹಾ ಪರಿನಿರ್ವಾಣದ ಪ್ರಯುಕ್ತ ಡಿಸೆಂಬರ್ 6ರಂದು ನಗರ ಹೊರವಲಯದಲ್ಲಿರುವ ಜಾಫರಬಾದ ಸ್ಮಶಾನ ಭೂಮಿಯಲ್ಲಿ ‘ಡಾ.ಬಿ.ಆರ್.ಅಂಬೇಡ್ಕರ್ –ಒಂದು ಚಿಂತನೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಕೆ.ಮದನಕರ ತಿಳಿಸಿದರು.</p>.<p>‘ಡಿ.5ರಂದು ಸ್ಮಶಾನದಲ್ಲಿ ಭಜನೆ ನಡೆಸಿ, ಅಲ್ಲೇ ಮಲಗುತ್ತೇವೆ. ಡಿ.6ರಂದು ಸ್ಮಶಾನದ ‘ಎಂ. ಜಯಣ್ಣ ವೇದಿಕೆ’ಯಲ್ಲಿ ಬೆಳಿಗ್ಗೆ 11ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಎರಡು ಜೋಡಿಗಳ ವಿವಾಹ, ಚಿಂತನಾ ಕಾರ್ಯಕ್ರಮ ನಡೆಸಲಾಗುವುದು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಚಿಂತನಾ ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಸತೀಶ ಜಾರಕಿಹೊಳಿ, ನಟ ದುನಿಯಾ ವಿಜಯ್ ಸೇರಿದಂತೆ ಸಾಮಾಜಿಕ ಹೋರಾಟಗಾರರು, ಚಿಂತಕರು, ಸ್ವಾಮೀಜಿಗಳು ಭಾಗವಹಿಸುವರು’ ಎಂದರು.</p>.<p>ದಲಿತ ಸೇನೆ ಸಂಘಟನೆಯ ಮುಖಂಡರಾದ ಗೌಸ್ಬಾಬಾ ಜುನೈದಿ, ಶ್ರೀಕಾಂತ ರೆಡ್ಡಿ, ಗುರು ಮಳಗಿ, ಕಪಿಲ ವಾಲಿ, ವಸಂತ ಆರ್. ಲೇಂಗಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ:</strong> ಡಾ.ಬಿ.ಆರ್.ಅಂಬೇಡ್ಕರ್ ಅವರ 64ನೇ ಮಹಾ ಪರಿನಿರ್ವಾಣದ ಪ್ರಯುಕ್ತ ಡಿಸೆಂಬರ್ 6ರಂದು ನಗರ ಹೊರವಲಯದಲ್ಲಿರುವ ಜಾಫರಬಾದ ಸ್ಮಶಾನ ಭೂಮಿಯಲ್ಲಿ ‘ಡಾ.ಬಿ.ಆರ್.ಅಂಬೇಡ್ಕರ್ –ಒಂದು ಚಿಂತನೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಕೆ.ಮದನಕರ ತಿಳಿಸಿದರು.</p>.<p>‘ಡಿ.5ರಂದು ಸ್ಮಶಾನದಲ್ಲಿ ಭಜನೆ ನಡೆಸಿ, ಅಲ್ಲೇ ಮಲಗುತ್ತೇವೆ. ಡಿ.6ರಂದು ಸ್ಮಶಾನದ ‘ಎಂ. ಜಯಣ್ಣ ವೇದಿಕೆ’ಯಲ್ಲಿ ಬೆಳಿಗ್ಗೆ 11ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ, ಎರಡು ಜೋಡಿಗಳ ವಿವಾಹ, ಚಿಂತನಾ ಕಾರ್ಯಕ್ರಮ ನಡೆಸಲಾಗುವುದು’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಚಿಂತನಾ ಕಾರ್ಯಕ್ರಮದಲ್ಲಿ ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಸತೀಶ ಜಾರಕಿಹೊಳಿ, ನಟ ದುನಿಯಾ ವಿಜಯ್ ಸೇರಿದಂತೆ ಸಾಮಾಜಿಕ ಹೋರಾಟಗಾರರು, ಚಿಂತಕರು, ಸ್ವಾಮೀಜಿಗಳು ಭಾಗವಹಿಸುವರು’ ಎಂದರು.</p>.<p>ದಲಿತ ಸೇನೆ ಸಂಘಟನೆಯ ಮುಖಂಡರಾದ ಗೌಸ್ಬಾಬಾ ಜುನೈದಿ, ಶ್ರೀಕಾಂತ ರೆಡ್ಡಿ, ಗುರು ಮಳಗಿ, ಕಪಿಲ ವಾಲಿ, ವಸಂತ ಆರ್. ಲೇಂಗಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>