ಕೆಲವು ಸಣ್ಣ ಪುಟ್ಟ ಘಟನೆಗಳನ್ನೇ ದೊಡ್ಡದಾಗಿ ಇಡೀ ದಿನ ಟಿ.ವಿ.ಗಳಲ್ಲಿ ತೋರಿಸಲಾಗುತ್ತದೆ. ಸದನದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದರೂ ಅದರ ಬಗ್ಗೆ ಯಾವುದೇ ಮಾಹಿತಿ ನೀಡುವುದಿಲ್ಲ. ಸಣ್ಣ ಪುಟ್ಟ ತಪ್ಪುಗಳು ಆಗುತ್ತವೆ. ಆ ಬಗ್ಗೆ ಎಚ್ಚರಿಕೆ ನೀಡುವುದು ಮಾಧ್ಯಮಗಳ ಕರ್ತವ್ಯ ಎಂಬುದು ನಿಜ. ಆದರೆ, ಇಡೀ ಸದನವೇ ಸರಿಯಾಗಿ ನಡೆಯುತ್ತಿಲ್ಲ ಎಂಬಂತೆ ಬಿಂಬಿಸುವುದು ಸರಿಯಲ್ಲ ಎಂದು ಹೊರಟ್ಟಿ ಹೇಳಿದರು.