<p><strong>ಬೆಂಗಳೂರು:</strong> ವಿಧಾನ ಪರಿಷತ್ತಿನ ಒಳಗೆ ಮೊಬೈಲ್ ಫೋನ್ಗಳನ್ನು ತರುವುದಕ್ಕೆ ನಿಷೇಧ ವಿಧಿಸುವುದೂ ಸೇರಿ ಕೆಲವು ನಿಯಮಾವಳಿಗಳನ್ನು ಜಾರಿ ತರಲಾಗುವುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.</p>.<p>ಖಾಸಗಿ ಸುದ್ದಿವಾಹಿನಿಗಳ ಕ್ಯಾಮರಾಗಳ ಪ್ರವೇಶಕ್ಕೆ ನಿರ್ಬಂಧ ಇರುವುದಿಲ್ಲ. ಆದರೆ, ವಿವೇಕ ಮತ್ತು ವಿವೇಚನೆಯಿಂದ ಮಾಧ್ಯಮಗಳು ಕಾರ್ಯನಿರ್ವಹಿಸಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>ಕೆಲವು ಸಣ್ಣ ಪುಟ್ಟ ಘಟನೆಗಳನ್ನೇ ದೊಡ್ಡದಾಗಿ ಇಡೀ ದಿನ ಟಿ.ವಿ.ಗಳಲ್ಲಿ ತೋರಿಸಲಾಗುತ್ತದೆ. ಸದನದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದರೂ ಅದರ ಬಗ್ಗೆ ಯಾವುದೇ ಮಾಹಿತಿ ನೀಡುವುದಿಲ್ಲ. ಸಣ್ಣ ಪುಟ್ಟ ತಪ್ಪುಗಳು ಆಗುತ್ತವೆ. ಆ ಬಗ್ಗೆ ಎಚ್ಚರಿಕೆ ನೀಡುವುದು ಮಾಧ್ಯಮಗಳ ಕರ್ತವ್ಯ ಎಂಬುದು ನಿಜ. ಆದರೆ, ಇಡೀ ಸದನವೇ ಸರಿಯಾಗಿ ನಡೆಯುತ್ತಿಲ್ಲ ಎಂಬಂತೆ ಬಿಂಬಿಸುವುದು ಸರಿಯಲ್ಲ ಎಂದು ಹೊರಟ್ಟಿ ಹೇಳಿದರು.</p>.<p>ಹೀಗೆಂದ ಮಾತ್ರಕ್ಕೆ ಮಾಧ್ಯಮವನ್ನು ದೂರ ಇಡುವುದೂ ಇಲ್ಲ, ನಿಷೇಧ ವಿಧಿಸುವುದಿಲ್ಲ. ಹೆಚ್ಚು ಸ್ವಯಂ ನಿಯಂತ್ರಣ ಮತ್ತು ವಿವೇಕದಿಂದ ಕಾರ್ಯ ನಿರ್ವಹಿಸಬೇಕು ಎಂಬುದಷ್ಟೇ ನಮ್ಮ ಕಾಳಜಿ ಎಂದರು.</p>.<p>ವಿಧಾನಪರಿಷತ್ ಅಧಿವೇಶನವೂ ಮಾ.4 ರಿಂದಲೇ ಆರಂಭವಾಗುತ್ತದೆ. ಆದರೆ ಒಂದು ದೇಶ ಮತ್ತು ಒಂದು ಚುನಾವಣೆ ವಿಚಾರವಾಗಿ ಚರ್ಚೆ ನಡೆಸುವ ಸಂಬಂಧ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ನಾವು ಪ್ರಶ್ನೋತ್ತರ ಮತ್ತು ಇತರ ಕಲಾಪಗಳನ್ನು ನಡೆಸಲು ತೀರ್ಮಾನಿಸಿದ್ದೇವೆ ಎಂದು ಹೊರಟ್ಟಿ ಹೇಳಿದರು.</p>.<p>ಮೀಸಲಾತಿಗೆ ಬಡತನವೇ ಮಾನದಂಡವಾಗಲಿ: ಇಂದಿನ ದಿನಗಳಲ್ಲಿ ಕುಟುಂಬಗಳ ಆರ್ಥಿಕ ವ್ಯವಸ್ಥೆಯನ್ನು ನೋಡಿ ಮೀಸಲಾತಿ ನಿಗದಿ ಮಾಡಬೇಕು. ಆಗ ಎಲ್ಲ ಸಮುದಾಯಗಳ ಬಡವರಿಗೂ ನ್ಯಾಯ ಸಿಗುತ್ತದೆ ಎಂದು ಹೊರಟ್ಟಿ ಅಭಿಪ್ರಾಯಪಟ್ಟರು.</p>.<p>ಸ್ವಾಮೀಜಿಗಳು ಬೀದಿಗಿಳಿದು ಹೋರಾಟ ಮಾಡುತ್ತಿರುವ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಅವರು(ಮಠಾಧೀಶರು) ದೊಡ್ಡವರು, ಅವರ ಬಗ್ಗೆ ಮಾತನಾಡದೇ ಇರುವುದೇ ಒಳ್ಳೆಯದು ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ವಿಧಾನ ಪರಿಷತ್ತಿನ ಒಳಗೆ ಮೊಬೈಲ್ ಫೋನ್ಗಳನ್ನು ತರುವುದಕ್ಕೆ ನಿಷೇಧ ವಿಧಿಸುವುದೂ ಸೇರಿ ಕೆಲವು ನಿಯಮಾವಳಿಗಳನ್ನು ಜಾರಿ ತರಲಾಗುವುದು ಎಂದು ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.</p>.<p>ಖಾಸಗಿ ಸುದ್ದಿವಾಹಿನಿಗಳ ಕ್ಯಾಮರಾಗಳ ಪ್ರವೇಶಕ್ಕೆ ನಿರ್ಬಂಧ ಇರುವುದಿಲ್ಲ. ಆದರೆ, ವಿವೇಕ ಮತ್ತು ವಿವೇಚನೆಯಿಂದ ಮಾಧ್ಯಮಗಳು ಕಾರ್ಯನಿರ್ವಹಿಸಬೇಕು ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>ಕೆಲವು ಸಣ್ಣ ಪುಟ್ಟ ಘಟನೆಗಳನ್ನೇ ದೊಡ್ಡದಾಗಿ ಇಡೀ ದಿನ ಟಿ.ವಿ.ಗಳಲ್ಲಿ ತೋರಿಸಲಾಗುತ್ತದೆ. ಸದನದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದರೂ ಅದರ ಬಗ್ಗೆ ಯಾವುದೇ ಮಾಹಿತಿ ನೀಡುವುದಿಲ್ಲ. ಸಣ್ಣ ಪುಟ್ಟ ತಪ್ಪುಗಳು ಆಗುತ್ತವೆ. ಆ ಬಗ್ಗೆ ಎಚ್ಚರಿಕೆ ನೀಡುವುದು ಮಾಧ್ಯಮಗಳ ಕರ್ತವ್ಯ ಎಂಬುದು ನಿಜ. ಆದರೆ, ಇಡೀ ಸದನವೇ ಸರಿಯಾಗಿ ನಡೆಯುತ್ತಿಲ್ಲ ಎಂಬಂತೆ ಬಿಂಬಿಸುವುದು ಸರಿಯಲ್ಲ ಎಂದು ಹೊರಟ್ಟಿ ಹೇಳಿದರು.</p>.<p>ಹೀಗೆಂದ ಮಾತ್ರಕ್ಕೆ ಮಾಧ್ಯಮವನ್ನು ದೂರ ಇಡುವುದೂ ಇಲ್ಲ, ನಿಷೇಧ ವಿಧಿಸುವುದಿಲ್ಲ. ಹೆಚ್ಚು ಸ್ವಯಂ ನಿಯಂತ್ರಣ ಮತ್ತು ವಿವೇಕದಿಂದ ಕಾರ್ಯ ನಿರ್ವಹಿಸಬೇಕು ಎಂಬುದಷ್ಟೇ ನಮ್ಮ ಕಾಳಜಿ ಎಂದರು.</p>.<p>ವಿಧಾನಪರಿಷತ್ ಅಧಿವೇಶನವೂ ಮಾ.4 ರಿಂದಲೇ ಆರಂಭವಾಗುತ್ತದೆ. ಆದರೆ ಒಂದು ದೇಶ ಮತ್ತು ಒಂದು ಚುನಾವಣೆ ವಿಚಾರವಾಗಿ ಚರ್ಚೆ ನಡೆಸುವ ಸಂಬಂಧ ಸರ್ಕಾರದಿಂದ ಯಾವುದೇ ಮಾಹಿತಿ ಬಂದಿಲ್ಲ. ನಾವು ಪ್ರಶ್ನೋತ್ತರ ಮತ್ತು ಇತರ ಕಲಾಪಗಳನ್ನು ನಡೆಸಲು ತೀರ್ಮಾನಿಸಿದ್ದೇವೆ ಎಂದು ಹೊರಟ್ಟಿ ಹೇಳಿದರು.</p>.<p>ಮೀಸಲಾತಿಗೆ ಬಡತನವೇ ಮಾನದಂಡವಾಗಲಿ: ಇಂದಿನ ದಿನಗಳಲ್ಲಿ ಕುಟುಂಬಗಳ ಆರ್ಥಿಕ ವ್ಯವಸ್ಥೆಯನ್ನು ನೋಡಿ ಮೀಸಲಾತಿ ನಿಗದಿ ಮಾಡಬೇಕು. ಆಗ ಎಲ್ಲ ಸಮುದಾಯಗಳ ಬಡವರಿಗೂ ನ್ಯಾಯ ಸಿಗುತ್ತದೆ ಎಂದು ಹೊರಟ್ಟಿ ಅಭಿಪ್ರಾಯಪಟ್ಟರು.</p>.<p>ಸ್ವಾಮೀಜಿಗಳು ಬೀದಿಗಿಳಿದು ಹೋರಾಟ ಮಾಡುತ್ತಿರುವ ಬಗ್ಗೆ ಯಾವುದೇ ಅಭಿಪ್ರಾಯ ವ್ಯಕ್ತಪಡಿಸುವುದಿಲ್ಲ. ಅವರು(ಮಠಾಧೀಶರು) ದೊಡ್ಡವರು, ಅವರ ಬಗ್ಗೆ ಮಾತನಾಡದೇ ಇರುವುದೇ ಒಳ್ಳೆಯದು ಎಂದು ವ್ಯಂಗ್ಯವಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>