‘ಲಾಕ್ಡೌನ್ ಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಘೋಷಿಸಿದೆ. ಬಾಡಿಗೆ ಪಾವತಿಸುವಂತೆ ಒತ್ತಾಯ ಮಾಡಬಾರದು ಎಂದೂ ಸೂಚಿಸಿವೆ. ಆದರೆ, ಆಸ್ತಿ ಮಾಲೀಕರಿಗೆ ಯಾವುದೇ ಪ್ರೋತ್ಸಾಹ ನೀಡಿಲ್ಲ. ಹೀಗಾಗಿ, ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.