ಬಹುಜನ ಸಮಾಜ ಪಕ್ಷ ಆಯೋಜಿಸಿದ್ದ ಬಹುಜನ ಯುವ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ‘ಗೋವುಗಳ ರಕ್ಷಣೆಗೆ ಕಾಯ್ದೆ ಜಾರಿ ಮಾಡುವ ಬಿಜೆಪಿ, ಹೆಣ್ಣು ಮಕ್ಕಳ ರಕ್ಷಣೆಗೆ ಅಷ್ಟೇ ಆದ್ಯತೆ ನೀಡುತ್ತಿಲ್ಲ. ಅದರ ಪರಿಣಾಮವಾಗಿ ಒಂದೇ ವರ್ಷದಲ್ಲಿ 40 ಸಾವಿರಕ್ಕೂ ಹೆಚ್ಚು ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ನಡೆದಿರುವ ಪ್ರಕರಣಗಳು ವರದಿಯಾಗಿವೆ. ಗೋಮಾತೆಯನ್ನು ರಕ್ಷಣೆ ಮಾಡುವವರಿಗೆ ಭಾರತ ಮಾತೆಯ ರಕ್ಷಣೆ ಮಾಡಲು ಏಕೆ ಸಾಧ್ಯವಾಗುತ್ತಿಲ್ಲ’ ಎಂದು ಪ್ರಶ್ನಿಸಿದರು.