ಗುಂಪು ಸೇರುತ್ತಿದ್ದುದನ್ನು ಅರಿತ ಪೊಲೀಸರು ತಕ್ಷಣವೇ ಸ್ಥಳದಲ್ಲಿ ಸೇರಿ, ಪ್ರತಿಭಟನಾ ರ್ಯಾಲಿ ತಡೆದರು. ಸ್ಥಳದಲ್ಲೇ ಮನವಿ ನೀಡಿ ಪ್ರತಿಭಟನೆ ಕೈಬಿಡುವಂತೆ ಮನವೊಲಿಸಲು ಯತ್ನಿಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಸ್ಥಳಕ್ಕೆ ಬಂದು ಮನವಿ ಸ್ವೀಕರಿಸಿದರು. ಆದರೆ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನೆ ನಡೆಸಲು ಅಭ್ಯರ್ಥಿಗಳು ಪಟ್ಟು ಹಿಡಿದರು.ಪೊಲೀಸರು ಇದಕ್ಕೆ ಅವಕಾಶ ನೀಡದಿ ದ್ದಾಗ ಉದ್ರಿಕ್ತರಾಗಿ ಘೋಷಣೆ ಕೂಗಿದರು. ಖಾಸಗಿ ಬಸ್ಸುಗಳ ಮೇಲೆ ಕಲ್ಲು ತೂರಿದರು.