ಮೈಸೂರು, ಮಂಗಳೂರು, ಹುಬ್ಬಳ್ಳಿ,ಕಲಬುರ್ಗಿ, ಚಾಮರಾಜನಗರ, ವಿಜಯಪುರ, ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ಪ್ರಮುಖ ನಗರಗಳಲ್ಲಿ ರಸ್ತೆ ತಡೆ ನಡೆಯಿತು. ರೈತ, ದಲಿತ, ಕಾರ್ಮಿಕ ಐಕ್ಯ ಹೋರಾಟದ ನೇತೃತ್ವದಲ್ಲಿ 35 ಸಂಘಟನೆಗಳಲ್ಲದೆ, ಕಾಂಗ್ರೆಸ್, ಜೆಡಿಎಸ್, ಸಿಪಿಎಂ, ಸಿಪಿಐ ಹಾಗೂ ಆಮ್ ಆದ್ಮಿ ಪಾರ್ಟಿ ಪ್ರತಿಭಟನೆಗೆ ಕೈ ಜೋಡಿಸಿದವು.