10 ಕ್ಕೂ ಹೆಚ್ಚು ಮುಖ್ಯಮಂತ್ರಿಗಳನ್ನು ನೋಡಿದ್ದೇನೆ, ಯಾರೂ ಕನ್ನಡ ಪರ ಹೋರಾಟವನ್ನು ಹತ್ತಿಕ್ಕಿಲ್ಲ. ಯಡಿಯೂರಪ್ಪ ಮಾತ್ರ ಕನ್ನಡ ಪರ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ.ಈಗ ಮರಾಠಿ ಪ್ರಾಧಿಕಾರದಂತೆ ಮುಂದೆ ತೆಲಗು, ತಮಿಳು, ಮಾರವಾಡಿ, ಮಲಯಾಳಂ ಪ್ರಾಧಿಕಾರ ಮಾಡಿ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಬೇಕಾಗುತ್ತದೆ. ಇದರಿಂದ ಕನ್ನಡ ಮಾಯವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.