ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ಮಂಡಳಿಗಳ ವಿಲೀನಕ್ಕೆ ವಿರೋಧ: ಹೋರಾಟಕ್ಕೆ ಸಮಿತಿ ರಚನೆ

Last Updated 27 ಸೆಪ್ಟೆಂಬರ್ 2020, 19:50 IST
ಅಕ್ಷರ ಗಾತ್ರ

ಬೆಂಗಳೂರು: ಪದವಿಪೂರ್ವ ಪರೀಕ್ಷಾ ಮಂಡಳಿಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯೊಂದಿಗೆ ವಿಲೀನಗೊಳಿಸುವುದನ್ನು ವಿರೋಧಿಸಿ ಹೋರಾಟಕ್ಕಿಳಿಯಲು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರು, ಪ್ರಾಂಶುಪಾಲರು ಹಾಗೂ ಬೋಧಕೇತರ ಸಿಬ್ಬಂದಿ ಒಳಗೊಂಡ ಜಂಟಿ ಕ್ರಿಯಾ ಸಮಿತಿ ರಚಿಸಲಾಗಿದೆ.

ಈ ವಿಲೀನ ಪ್ರಸ್ತಾವ ಹಿಂದಿನ ಕಾಂಗ್ರೆಸ್ ಸರ್ಕಾರದಿಂದಲೇ ಇತ್ತು. ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ಅವರು ಕೆಲವು ತಿಂಗಳ ಹಿಂದೆ ಈ ಬಗ್ಗೆ ಮುಖ್ಯಮಂತ್ರಿ ಜೊತೆ ವಿಷಯ ಪ್ರಸ್ತಾಪಿಸಿದ್ದರು. ಆದರೆ, ಈ ಸಂಬಂಧ ಯಾವುದೇ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿಲ್ಲ.

ಪಿಯು ಮಂಡಳಿ ವಿಲೀನಕ್ಕೆ ಪಿಯು ಉಪನ್ಯಾಸಕರು, ಬೋಧಕೇತರರು ಹಾಗೂ ಪ್ರಾಂಶುಪಾಲರು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡಳಿಯನ್ನು ಪ್ರತ್ಯೇಕವಾಗಿಯೇ ಉಳಿಸಿಕೊಳ್ಳುವ ಕುರಿತು ಶಾಸಕರ ಭವನದಲ್ಲಿ ಭಾನುವಾರ ಸಭೆ ಸೇರಿ, ಹೋರಾಟಕ್ಕ ಸಮಿತಿ ರಚನೆ ಮಾಡಿದೆ.

‘ಉಪನ್ಯಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಈ ರೀತಿಯ ವಿಲೀನ ಸರಿಯಲ್ಲ. ಈ ಸಂಬಂಧ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಿದ್ದೇವೆ. ಪ್ರಸ್ತಾವವನ್ನು ಇಲಾಖೆ ಕೈಬಿಡದಿದ್ದರೆ ಹೋರಾಟ ನಡೆಸಲಿದ್ದೇವೆ. ಪ್ರಾಂಶುಪಾಲರ ಸಂಘದ ಗೌರವಾಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ, ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ, ಬೋಧಕತೇರ ಸಂಘದ ಅಧ್ಯಕ್ಷ ನಂದೀಶ್ ಸೇರಿದಂತೆ ಸುಮಾರು 50 ಮಂದಿ ಪದಾಧಿಕಾರಿಗಳು ಚರ್ಚೆ ಮಾಡಿ, ಜಂಟಿ ಕ್ರಿಯಾ ಸಮಿತಿ ರಚಿಸಿದ್ದೇವೆ. ಈ ಸಮಿತಿಯ ಮೂಲಕವೇ ಹೋರಾಟ ಮಾಡಲಿದ್ದೇವೆ’ ಎಂದು ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT