‘ಉಪನ್ಯಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಈ ರೀತಿಯ ವಿಲೀನ ಸರಿಯಲ್ಲ. ಈ ಸಂಬಂಧ ಶಿಕ್ಷಣ ಸಚಿವರಿಗೆ ಪತ್ರ ಬರೆಯಲಿದ್ದೇವೆ. ಪ್ರಸ್ತಾವವನ್ನು ಇಲಾಖೆ ಕೈಬಿಡದಿದ್ದರೆ ಹೋರಾಟ ನಡೆಸಲಿದ್ದೇವೆ. ಪ್ರಾಂಶುಪಾಲರ ಸಂಘದ ಗೌರವಾಧ್ಯಕ್ಷ ಕೆ.ಟಿ. ಶ್ರೀಕಂಠೇಗೌಡ, ಉಪನ್ಯಾಸಕರ ಸಂಘದ ಗೌರವಾಧ್ಯಕ್ಷ ತಿಮ್ಮಯ್ಯ ಪುರ್ಲೆ, ಬೋಧಕತೇರ ಸಂಘದ ಅಧ್ಯಕ್ಷ ನಂದೀಶ್ ಸೇರಿದಂತೆ ಸುಮಾರು 50 ಮಂದಿ ಪದಾಧಿಕಾರಿಗಳು ಚರ್ಚೆ ಮಾಡಿ, ಜಂಟಿ ಕ್ರಿಯಾ ಸಮಿತಿ ರಚಿಸಿದ್ದೇವೆ. ಈ ಸಮಿತಿಯ ಮೂಲಕವೇ ಹೋರಾಟ ಮಾಡಲಿದ್ದೇವೆ’ ಎಂದು ಪಿಯು ಉಪನ್ಯಾಸಕರ ಸಂಘದ ಅಧ್ಯಕ್ಷ ಎ.ಎಚ್. ನಿಂಗೇಗೌಡ ಹೇಳಿದರು.