<p><strong>ಬೆಂಗಳೂರು</strong>: ‘ಹಿಂದಿ ರಾಷ್ಟ್ರ ಭಾಷೆ ಎಂಬುದಾಗಿ ಸಾಹಿತಿ ದೊಡ್ಡರಂಗೇಗೌಡರು ನೀಡಿದ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ಹಾವೇರಿಯಲ್ಲಿ ನಡೆಯಬೇಕಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೇ ಪ್ರತಿಭಟಿಸಲಾಗುತ್ತದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಎಚ್ಚರಿಸಿದ್ದಾರೆ.</p>.<p>‘ದೊಡ್ಡರಂಗೇಗೌಡರು ಕನ್ನಡದ ಹೆಸರಾಂತ ಕವಿ. ಅವರ ಮೇಲೆ ನಾವೆಲ್ಲರೂ ಅಭಿಮಾನ ಇಟ್ಟುಕೊಂಡಿದ್ದೇವೆ. ಈಗ ಇದ್ದಕ್ಕಿದ್ದಂತೆ ಅವರಿಗೆ ಹಿಂದಿ ವ್ಯಾಮೋಹ ಹೇಗೆ ಬಂದಿತು. ಇದನ್ನು ಅವರೇ ಬಿಡಿಸಿ ಹೇಳಬೇಕು. ಅವರು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲೇ ಈ ಹೇಳಿಕೆ ಹೊರಬಂದಿರುವುದು ಕಳವಳಕಾರಿ. ಹಿಂದಿ ನಮ್ಮ ರಾಷ್ಟ್ರಭಾಷೆ ಯಲ್ಲ. ಹಾಗಿದ್ದರೂ ಅವರ ಬಾಯಿಂದ ಕೆಲವು ಪಟ್ಟಭದ್ರ ಶಕ್ತಿಗಳು ಈ ರೀತಿ ಹೇಳಿಸಿರಬಹುದೇ ಎಂಬ ಅನುಮಾನವಿದೆ. ಕನ್ನಡ ಜಾನಪದ ಸೊಗಡಿನ ಸಾಹಿತಿ ಇದ್ದಕ್ಕಿದ್ದಂತೆ ಬದಲಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಅವರು ಹಿಂದಿ ಹೇರಿಕೆ ಪರವಾಗಿ ಮಾತನಾಡಲು ಏನು ಕಾರಣ ಎಂದು ಅವರೇ ಬಹಿರಂಗಪಡಿಸಲಿ. ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದಕ್ಕೆ ಋಣ ಸಂದಾಯ ಮಾಡುತ್ತಿದ್ದಾರೆಯೇ ಅಥವಾ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡುವ ಸಂದರ್ಭದಲ್ಲಿ ಹಿಂದಿಪರ ಮಾತಾಡಲು ಷರತ್ತು ವಿಧಿಸಲಾಗಿತ್ತೇ’ ಎಂದೂ ಅವರು ಕೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಹಿಂದಿ ರಾಷ್ಟ್ರ ಭಾಷೆ ಎಂಬುದಾಗಿ ಸಾಹಿತಿ ದೊಡ್ಡರಂಗೇಗೌಡರು ನೀಡಿದ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು. ಇಲ್ಲವಾದಲ್ಲಿ ಹಾವೇರಿಯಲ್ಲಿ ನಡೆಯಬೇಕಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೇ ಪ್ರತಿಭಟಿಸಲಾಗುತ್ತದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣಗೌಡ ಎಚ್ಚರಿಸಿದ್ದಾರೆ.</p>.<p>‘ದೊಡ್ಡರಂಗೇಗೌಡರು ಕನ್ನಡದ ಹೆಸರಾಂತ ಕವಿ. ಅವರ ಮೇಲೆ ನಾವೆಲ್ಲರೂ ಅಭಿಮಾನ ಇಟ್ಟುಕೊಂಡಿದ್ದೇವೆ. ಈಗ ಇದ್ದಕ್ಕಿದ್ದಂತೆ ಅವರಿಗೆ ಹಿಂದಿ ವ್ಯಾಮೋಹ ಹೇಗೆ ಬಂದಿತು. ಇದನ್ನು ಅವರೇ ಬಿಡಿಸಿ ಹೇಳಬೇಕು. ಅವರು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲೇ ಈ ಹೇಳಿಕೆ ಹೊರಬಂದಿರುವುದು ಕಳವಳಕಾರಿ. ಹಿಂದಿ ನಮ್ಮ ರಾಷ್ಟ್ರಭಾಷೆ ಯಲ್ಲ. ಹಾಗಿದ್ದರೂ ಅವರ ಬಾಯಿಂದ ಕೆಲವು ಪಟ್ಟಭದ್ರ ಶಕ್ತಿಗಳು ಈ ರೀತಿ ಹೇಳಿಸಿರಬಹುದೇ ಎಂಬ ಅನುಮಾನವಿದೆ. ಕನ್ನಡ ಜಾನಪದ ಸೊಗಡಿನ ಸಾಹಿತಿ ಇದ್ದಕ್ಕಿದ್ದಂತೆ ಬದಲಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಅವರು ಹಿಂದಿ ಹೇರಿಕೆ ಪರವಾಗಿ ಮಾತನಾಡಲು ಏನು ಕಾರಣ ಎಂದು ಅವರೇ ಬಹಿರಂಗಪಡಿಸಲಿ. ವಿಧಾನಪರಿಷತ್ ಸದಸ್ಯರನ್ನಾಗಿ ಮಾಡಿದ್ದಕ್ಕೆ ಋಣ ಸಂದಾಯ ಮಾಡುತ್ತಿದ್ದಾರೆಯೇ ಅಥವಾ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆ ಮಾಡುವ ಸಂದರ್ಭದಲ್ಲಿ ಹಿಂದಿಪರ ಮಾತಾಡಲು ಷರತ್ತು ವಿಧಿಸಲಾಗಿತ್ತೇ’ ಎಂದೂ ಅವರು ಕೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>