‘ದೊಡ್ಡರಂಗೇಗೌಡರು ಕನ್ನಡದ ಹೆಸರಾಂತ ಕವಿ. ಅವರ ಮೇಲೆ ನಾವೆಲ್ಲರೂ ಅಭಿಮಾನ ಇಟ್ಟುಕೊಂಡಿದ್ದೇವೆ. ಈಗ ಇದ್ದಕ್ಕಿದ್ದಂತೆ ಅವರಿಗೆ ಹಿಂದಿ ವ್ಯಾಮೋಹ ಹೇಗೆ ಬಂದಿತು. ಇದನ್ನು ಅವರೇ ಬಿಡಿಸಿ ಹೇಳಬೇಕು. ಅವರು ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲೇ ಈ ಹೇಳಿಕೆ ಹೊರಬಂದಿರುವುದು ಕಳವಳಕಾರಿ. ಹಿಂದಿ ನಮ್ಮ ರಾಷ್ಟ್ರಭಾಷೆ ಯಲ್ಲ. ಹಾಗಿದ್ದರೂ ಅವರ ಬಾಯಿಂದ ಕೆಲವು ಪಟ್ಟಭದ್ರ ಶಕ್ತಿಗಳು ಈ ರೀತಿ ಹೇಳಿಸಿರಬಹುದೇ ಎಂಬ ಅನುಮಾನವಿದೆ. ಕನ್ನಡ ಜಾನಪದ ಸೊಗಡಿನ ಸಾಹಿತಿ ಇದ್ದಕ್ಕಿದ್ದಂತೆ ಬದಲಾಗಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದ್ದಾರೆ.