ಹೈನುಗಾರಿಕೆ ಲಾಭದಾಯಕವಲ್ಲ ಎಂಬ ಕಾರಣಕ್ಕಾಗಿ ರೈತರು ಹೈನುಗಾರಿಕೆಯಿಂದ ವಿಮುಖರಾಗುತ್ತಿದ್ದಾರೆ. ಪರಿಣಾಮವಾಗಿ ಪ್ರತಿ ದಿನದ ಹಾಲು ಉತ್ಪಾದನೆ 3 ಲಕ್ಷ ಲೀಟರ್ ಕುಸಿತ ಕಂಡಿದೆ. ಜಾನುವಾರು ಫೀಡ್ಸ್ಗೆ ನೀಡುತ್ತಿದ್ದ ಸಬ್ಸಿಡಿಯನ್ನು ಸರ್ಕಾರ ಹಿಂತೆಗೆದುಕೊಂಡಿದ್ದು, ಸದ್ಯ ಚೀಲಕ್ಕೆ ₹ 1,040 ಆಗಿದೆ. ಹೀಗಾಗಿ, ಲಾಭಕ್ಕಿಂತ ಖರ್ಚು ಹೆಚ್ಚುತ್ತಿದ್ದು, ರೈತರು ಹೈನುಗಾರಿಕೆಯನ್ನು ತೊರೆಯುತ್ತಿದ್ದಾರೆ. ಇದರಿಂದ ಹಾಲು ಉತ್ಪಾದನೆ ಕುಂಠಿತ ಆಗುತ್ತಿದೆ. ಇದು ನಿಜಕ್ಕೂ ಆಘಾತಕಾರಿ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.