<p><strong>ಬೆಂಗಳೂರು: </strong>‘ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಗಳನ್ನು ಉಳಿಸಿ’ ಆಂದೋಲನದ ಭಾಗವಾಗಿ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಮಹಿಳಾ ಸಾಂತ್ವನ ಕೇಂದ್ರದ ನೌಕರರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಮಹಿಳಾ ಸಾಂತ್ವನ ಕೇಂದ್ರಗಳ ಒಕ್ಕೂಟ, ಸಾಧನಾ ರಾಷ್ಟ್ರೀಯ ಮಹಿಳಾ ಚಿಂತನಾ ವೇದಿಕೆ, ಗ್ಲೋಬಲ್ ಕನ್ಸರ್ನ್ ಇಂಡಿಯಾ, ಮಹಿಳಾ ಪರ ಸಂಘಟನೆಗಳ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸಿದ ನೌಕರರು ಮತ್ತು ಪ್ರತಿನಿಧಿಗಳು, ಕೇಂದ್ರಗಳನ್ನು ಮುಚ್ಚುವ ಸರ್ಕಾರದ ನಿಲುವು ಖಂಡಿಸಿದರು.</p>.<p>‘ಮಹಿಳೆಯರ ಮೇಲಾಗುತ್ತಿರುವ ಎಲ್ಲ ರೀತಿಯ ದೌರ್ಜನ್ಯಗಳನ್ನು ನಿಯಂತ್ರಿಸಲು 2000–01ನೇ ಸಾಲಿನಲ್ಲಿ ರಾಜ್ಯದಾದ್ಯಂತ ಸಾಂತ್ವನ ಕೇಂದ್ರಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಾರಂಭಿಸಿತ್ತು. 2021ರ ಏಪ್ರಿಲ್ 1ರಿಂದ 71 ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಪ್ರತಿಭಟನಾಕಾರರು ದೂರಿದರು.</p>.<p>‘ಕೇಂದ್ರಗಳನ್ನು ಮುಂದುವರಿಸುವಂತೆ ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಈ ಕೇಂದ್ರಗಳನ್ನು ಮುಂದುವರಿಸುವಂತೆ ಅವರು ಸೂಚನೆ ನೀಡಿದ್ದರೂ, ಆರ್ಥಿಕ ಇಲಾಖೆ ಈವರೆಗೆ ಅನುಮೋದನೆ ನೀಡಿಲ್ಲ’ ಎಂದು ಅವರು ಆರೋಪಿಸಿದರು.</p>.<p>‘194 ಸಾಂತ್ವನ ಕೇಂದ್ರಗಳನ್ನು ಮುಂದುವರಿಸಲು ವರ್ಷಕ್ಕೆ ₹12 ಕೋಟಿ ಮಾತ್ರ ಅನುದಾನ ಅಗತ್ಯವಿದೆ. 5 ವರ್ಷಗಳ ಅಂಕಿ–ಅಂಶ ಗಮನಿಸಿದರೆ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಈ ಯೋಜನೆ ಯಶಸ್ವಿಯಾಗಿ ಕಾರ್ಯಗತಗೊಂಡಿದೆ. ಮಹಿಳೆಯರ ಧ್ವನಿಯಾಗಿ ಈ ಕೇಂದ್ರಗಳು ಕೆಲಸ ಮಾಡಿದೆ. ಆದ್ದರಿಂದ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಎಲ್ಲಾ ಸಾಂತ್ವನ ಕೇಂದ್ರಗಳನ್ನು ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>‘ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರಗಳನ್ನು ಉಳಿಸಿ’ ಆಂದೋಲನದ ಭಾಗವಾಗಿ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು, ಮಹಿಳಾ ಸಾಂತ್ವನ ಕೇಂದ್ರದ ನೌಕರರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಕರ್ನಾಟಕ ರಾಜ್ಯ ಮಹಿಳಾ ಸಾಂತ್ವನ ಕೇಂದ್ರಗಳ ಒಕ್ಕೂಟ, ಸಾಧನಾ ರಾಷ್ಟ್ರೀಯ ಮಹಿಳಾ ಚಿಂತನಾ ವೇದಿಕೆ, ಗ್ಲೋಬಲ್ ಕನ್ಸರ್ನ್ ಇಂಡಿಯಾ, ಮಹಿಳಾ ಪರ ಸಂಘಟನೆಗಳ ನೇತೃತ್ವದಲ್ಲಿ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ನಡೆಸಿದ ನೌಕರರು ಮತ್ತು ಪ್ರತಿನಿಧಿಗಳು, ಕೇಂದ್ರಗಳನ್ನು ಮುಚ್ಚುವ ಸರ್ಕಾರದ ನಿಲುವು ಖಂಡಿಸಿದರು.</p>.<p>‘ಮಹಿಳೆಯರ ಮೇಲಾಗುತ್ತಿರುವ ಎಲ್ಲ ರೀತಿಯ ದೌರ್ಜನ್ಯಗಳನ್ನು ನಿಯಂತ್ರಿಸಲು 2000–01ನೇ ಸಾಲಿನಲ್ಲಿ ರಾಜ್ಯದಾದ್ಯಂತ ಸಾಂತ್ವನ ಕೇಂದ್ರಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಾರಂಭಿಸಿತ್ತು. 2021ರ ಏಪ್ರಿಲ್ 1ರಿಂದ 71 ಸಾಂತ್ವನ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಪ್ರತಿಭಟನಾಕಾರರು ದೂರಿದರು.</p>.<p>‘ಕೇಂದ್ರಗಳನ್ನು ಮುಂದುವರಿಸುವಂತೆ ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿತ್ತು. ಈ ಕೇಂದ್ರಗಳನ್ನು ಮುಂದುವರಿಸುವಂತೆ ಅವರು ಸೂಚನೆ ನೀಡಿದ್ದರೂ, ಆರ್ಥಿಕ ಇಲಾಖೆ ಈವರೆಗೆ ಅನುಮೋದನೆ ನೀಡಿಲ್ಲ’ ಎಂದು ಅವರು ಆರೋಪಿಸಿದರು.</p>.<p>‘194 ಸಾಂತ್ವನ ಕೇಂದ್ರಗಳನ್ನು ಮುಂದುವರಿಸಲು ವರ್ಷಕ್ಕೆ ₹12 ಕೋಟಿ ಮಾತ್ರ ಅನುದಾನ ಅಗತ್ಯವಿದೆ. 5 ವರ್ಷಗಳ ಅಂಕಿ–ಅಂಶ ಗಮನಿಸಿದರೆ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಈ ಯೋಜನೆ ಯಶಸ್ವಿಯಾಗಿ ಕಾರ್ಯಗತಗೊಂಡಿದೆ. ಮಹಿಳೆಯರ ಧ್ವನಿಯಾಗಿ ಈ ಕೇಂದ್ರಗಳು ಕೆಲಸ ಮಾಡಿದೆ. ಆದ್ದರಿಂದ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿರುವ ಎಲ್ಲಾ ಸಾಂತ್ವನ ಕೇಂದ್ರಗಳನ್ನು ಮುಂದುವರಿಸಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>