ಕೆಎಸ್ಆರ್ ರೈಲು ನಿಲ್ದಾಣದಿಂದ ಮೆರವಣಿಗೆ ಹೊರಟ ವಿವಿಧ ಸಂಘಟನೆಗಳ ಹೋರಾಟಗಾರರು, ಮೌರ್ಯ ವೃತ್ತದಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ. ವೆಂಕಟಸ್ವಾಮಿ, ‘ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಭೂಮಿ ಉಳಿಸದಿದ್ದರೆ ದಲಿತ ಸಂಘಟನೆಗಳಿಂದ ದೊಡ್ಡ ಮೊಟ್ಟದ ಹೋರಾಟವನ್ನು ಸರ್ಕಾರ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.