ಒಳಮೀಸಲಾತಿ: ಸದಾಶಿವ ಆಯೋಗದ ವರದಿ ವಿರೋಧಿಸಿ ಜ.10ಕ್ಕೆ ಪ್ರತಿಭಟನೆ

ಬೆಂಗಳೂರು: ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡು ಪರಿಶಿಷ್ಟ ಜಾತಿಗಳನ್ನು ಒಳಮೀಸಲಾತಿ ಹೆಸರಿನಲ್ಲಿ ವರ್ಗೀಕರಿಸಬಾರದು. ಸಾರ್ವಜನಿಕ ಚರ್ಚೆಗೆ ಒಳಪಡಿಸದೇ ಸಂಪುಟ ಉಪ ಸಮಿತಿಯು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಒತ್ತಾಯಿಸಿದೆ.
ಗೊಂದಲ, ಅಸ್ಪಷ್ಟತೆ, ಅವೈಜ್ಞಾನಿಕ, ಅಸಂವಿಧಾನಿಕ ಅಂಶಗಳನ್ನು ಒಳಗೊಂಡ ವರದಿಯನ್ನು ಆಧಾರವಾಗಿ ಪರಿಗಣಿಸದೇ ಕಾನೂನು ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ರಚನೆಯಾಗಿರುವ ಸಂಪುಟ ಉಪ ಸಮಿತಿಯೇ ಸ್ವಯಂ ಆಗಿ ಪರಿಶಿಷ್ಟ ಜಾತಿಗಳ ವರ್ಗೀಕರಣ ಮಾಡಲು ಕಾರ್ಯಸಾಧು ಶಿಫಾರಸು ಮಾಡಬೇಕು ಎಂದು ಒಕ್ಕೂಟ ಒತ್ತಾಯಿಸಿದೆ.
ಈ ಬೇಡಿಕೆ ಕುರಿತು ಸರ್ಕಾರದ ಮೇಲೆ ಒತ್ತಡ ಹೇರಲು ಜ.10ಕ್ಕೆ ಬೆಂಗಳೂರಿನಲ್ಲಿ 10 ಲಕ್ಷ ಜನರನ್ನು ಸೇರಿಸಿ ಪ್ರತಿಭಟನೆ ನಡೆಸಲು ಭೋವಿ ಸಮಾಜದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಶನಿವಾರ ನಡೆದ ಸಭೆಯಲ್ಲಿ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಯಿತು.
ಓದಿ... ಕಾರ್ಯಾಂಗದ ವೈಫಲ್ಯ ಮುಚ್ಚಲು ಒಳಮೀಸಲು: ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.