ಆಗ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ‘ನೀವು ನನಗೆ ಕೊಟ್ಟಿರುವ ಈ ಧಾನ್ಯದ ಗಂಟನ್ನು ಸರ್ಕಾರಕ್ಕೆ ತಲುಪಿಸುವ ಕೆಲಸ ಮಾಡುತ್ತೇನೆ’ ಎಂದು ಭರವಸೆ ನೀಡಿದರು. ನಂತರ, ಮಂಗಳವಾರ ಮಧ್ಯಾಹ್ನ ವಿಧಾನಸಭೆಯಲ್ಲಿ ಪಿಎಸ್ಐ ನೇಮಕಾತಿ ಅಕ್ರಮದ ಕುರಿತು ನಡೆದ ಚರ್ಚೆಯ ವೇಳೆ ಅವರು ಅಕ್ಕಿ–ಬೇಳೆಯ ಗಂಟನ್ನು ಸ್ಪೀಕರ್ ಕಾಗೇರಿಯವರ ಮೂಲಕ ಸರ್ಕಾರಕ್ಕೆ ಹಸ್ತಾಂತರಿಸಿದರು.