ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ಮಹಾರಾಷ್ಟ್ರದವರಾದಪ್ರಭು ಚವ್ಹಾಣ್, ರಾಜ್ಯದ ಲಂಬಾಣಿ ಸಮುದಾಯದ ಹೆಸರಿನಲ್ಲಿ ನಕಲಿ ಜಾತಿ ಪ್ರಮಾಣಪತ್ರ ಪಡೆದಿರುವ ಆರೋಪದ ಮೇರೆಗೆ ಶಾಸಕ ಸ್ಥಾನದಿಂದ ಅವರನ್ನು ವಜಾ ಮಾಡುವಂತೆ ಹೈಕೋರ್ಟ್ನ ಕಲಬುರಗಿ ಪೀಠದಲ್ಲಿ ರಿಟ್ ಅರ್ಜಿ ದಾಖಲಾಗಿತ್ತು. ಆದರೆ, ತಮ್ಮ ಪ್ರಭಾವದಿಂದ ಪ್ರಕರಣದಿಂದ ಪಾರಾಗಿದ್ದರು. ಈಗ ಅದೇ ಪ್ರಕರಣದ ಮರು ತನಿಖೆ ಮಾಡುವಂತೆ ಬೀದರ್ನ ಜಾತಿ ಪರಿಶೀಲನಾ ಸಮಿತಿಗೆ ನ್ಯಾಯಾಲಯ ಆದೇಶಿಸಿದೆ’ ಎಂದರು.