‘ಎಲ್ಲ ಜಾತಿ, ಜನಾಂಗ ಹಾಗೂ ಧರ್ಮದವರಿಗೆ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ನ್ಯಾಯ ಮತ್ತು ಅವಕಾಶಗಳಲ್ಲಿ ಸಮಾನತೆ ಸಿಗಬೇಕೆಂದು ಅಂಬೇಡ್ಕರ್ ಅವರು ಸಂವಿಧಾನದ ಮುನ್ನುಡಿಯಲ್ಲಿ ಹೇಳಿದ್ದಾರೆ. ಆದರೆ, ರಾಜ್ಯದ ಮಾದಿಗ ಮತ್ತು ಸಂಬಂಧಿತ ಜಾತಿಗಳಿಗೆ ಶಿಕ್ಷಣ, ಸರ್ಕಾರಿ ಉದ್ಯೋಗ, ಭೂಮಿ ಹಾಗೂ ಸಂಪತ್ತಿನಲ್ಲಿ ಸಮಾನ ಪಾಲು ಸಿಗದೇ ಅನ್ಯಾಯ ಆಗುತ್ತಿದೆ’ ಎಂದು ಪ್ರತಿಭಟನಕಾರರು ದೂರಿದರು.