ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಿಕ್ಷೆ ‌ಬೇಡಿ ರೈತರಿಂದ ಪ್ರತಿಭಟನೆ: ₹ 5,470 ಸರ್ಕಾರಕ್ಕೆ ಜಮಾ

Last Updated 24 ಅಕ್ಟೋಬರ್ 2020, 1:41 IST
ಅಕ್ಷರ ಗಾತ್ರ

ರಾಯಚೂರು: ಬೆಳೆ ವಿಮೆ ಪಾವತಿ ವಿಳಂಬ ಹಾಗೂ ಮಳೆಯಿಂದ ಆದ ಹಾನಿಗೆ ರಾಜ್ಯ ಸರ್ಕಾರ ಈವರೆಗೂ ಪರಿಹಾರ ನೀಡಿಲ್ಲ ಎಂದು ಆರೋಪಿಸಿಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಪದಾಧಿಕಾರಿಗಳು‌ ಶುಕ್ರವಾರ ನಗರದ ಸಾರ್ವಜನಿಕ ಪ್ರದೇಶಗಳಲ್ಲಿ ಜನರಿಂದ ಭಿಕ್ಷೆ ‌ಬೇಡಿದರು.

ಹೀಗೆ ಸಂಗ್ರಹವಾದ ₹ 5,470 ಅನ್ನು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ನೀಡಿ, ವಿನೂತನ ಪ್ರತಿಭಟನೆ ನಡೆಸಿದರು.

ರೈತ ಸಂಘದ ರಾಜ್ಯ ಘಟಕದ ಗೌರವಾಧ್ಯಕ್ಷ ಚಾಮರಸ ಮಾಲಿ‌ಪಾಟೀಲ ಮಾತನಾಡಿ, ‘ಮೂರು ವರ್ಷಗಳಿಂದ ರೈತರು ಬರದಿಂದ ಹಾಗೂ
ಈ ವರ್ಷ ಅತಿವೃಷ್ಟಿಯಿಂದ ಸಮಸ್ಯೆಯಲ್ಲಿದ್ದಾರೆ.ಬೆಳೆ‌ ಹಾನಿಗೆ ಈವರೆಗೂ ಪರಿಹಾರ ನೀಡಿಲ್ಲ.ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದಿವಾಳಿಯಾಗಿವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಖಂಡರಾದ ಅಮರಣ್ಣ ಗುಡಿಹಾಳ, ಜಿಲ್ಲಾಧ್ಯಕ್ಷ ಸುಗೂರಯ್ಯ ಸ್ವಾಮಿ‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT