<p><strong>ಬೆಂಗಳೂರು:</strong>‘ಹೌದ್ರಿ, ನಾನೂ ಆರ್ಎಸ್ಎಸ್ನಿಂದ ಬಂದಿದ್ದೇನೆ. ಪ್ರಧಾನಿ ಮೋದಿಯವರೂ ಆರ್ಎಸ್ಎಸ್ನವರೇ. ಆ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ಗೆ ತಿರುಗೇಟು ನೀಡಿದರು.</p>.<p>ವಿಧಾನಸಭೆಯಲ್ಲಿ ದಿನದ ಕಲಾಪದ ಕೊನೆಯಲ್ಲಿ ಕಾಂಗ್ರೆಸ್ ಸದಸ್ಯರು ಆರ್ಎಸ್ಎಸ್ ವಿರುದ್ಧ ಘೋಷಣೆ ಕೂಗಿದಾಗ ಯಡಿಯೂರಪ್ಪ ಸಿಟ್ಟಿಗೆದ್ದು, ‘ಹೌದು ನಾವೆಲ್ಲ ಆರ್ಎಸ್ಎಸ್ನವರು ಏನೀಗಾ? ಏನ್ ಮಾಡ್ತೀರಿ’ ಎಂದು ಪ್ರಶ್ನಿಸಿದರು.</p>.<p>‘ಆರ್ಎಸ್ಎಸ್ ಅನ್ನು ಟೀಕಿಸಿ ಟೀಕಿಸಿ ಈ ಸ್ಥಿತಿಗೆ ಬಂದಿದ್ದೀರಿ. ಇಲ್ಲಿ ಅರವತ್ತು ಎಪ್ಪತ್ತು ಜನ ಇದ್ದೀರಿ ಎಂದು ಕೂಗಾಡ್ತೀರಾ. ಹೀಗೆ ಮುಂದುವರಿಸಿದರೆ ಕಾಂಗ್ರೆಸ್ ನಾಮಾವಶೇಷ ಆಗುತ್ತದೆ’ ಎಂದು ಹೇಳಿದರು.</p>.<p>ಆರ್ಎಸ್ಎಸ್ ದೇಶದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಂಘಟನೆ ಎಂದೂ ಯಡಿಯೂರಪ್ಪ ಹೇಳಿದರು.</p>.<p>ಸಭಾಧ್ಯಕ್ಷ ವಿಶ್ವೇಶ್ವರ ಹೆಗೆಡೆ ಕಾಗೇರಿ ಮಾತನಾಡಿ, ‘ಈ ಚರ್ಚೆಗೂ ಆರ್ಎಸ್ಎಸ್ಗೂ ಸಂಬಂಧ ಇಲ್ಲ. ಆ ಸಂಘಟನೆಯ ಬಗ್ಗೆ ಇಲ್ಲಿ ಚರ್ಚಿಸುವುದು ಅಪ್ರಸ್ತುತ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong>‘ಹೌದ್ರಿ, ನಾನೂ ಆರ್ಎಸ್ಎಸ್ನಿಂದ ಬಂದಿದ್ದೇನೆ. ಪ್ರಧಾನಿ ಮೋದಿಯವರೂ ಆರ್ಎಸ್ಎಸ್ನವರೇ. ಆ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಂಗ್ರೆಸ್ಗೆ ತಿರುಗೇಟು ನೀಡಿದರು.</p>.<p>ವಿಧಾನಸಭೆಯಲ್ಲಿ ದಿನದ ಕಲಾಪದ ಕೊನೆಯಲ್ಲಿ ಕಾಂಗ್ರೆಸ್ ಸದಸ್ಯರು ಆರ್ಎಸ್ಎಸ್ ವಿರುದ್ಧ ಘೋಷಣೆ ಕೂಗಿದಾಗ ಯಡಿಯೂರಪ್ಪ ಸಿಟ್ಟಿಗೆದ್ದು, ‘ಹೌದು ನಾವೆಲ್ಲ ಆರ್ಎಸ್ಎಸ್ನವರು ಏನೀಗಾ? ಏನ್ ಮಾಡ್ತೀರಿ’ ಎಂದು ಪ್ರಶ್ನಿಸಿದರು.</p>.<p>‘ಆರ್ಎಸ್ಎಸ್ ಅನ್ನು ಟೀಕಿಸಿ ಟೀಕಿಸಿ ಈ ಸ್ಥಿತಿಗೆ ಬಂದಿದ್ದೀರಿ. ಇಲ್ಲಿ ಅರವತ್ತು ಎಪ್ಪತ್ತು ಜನ ಇದ್ದೀರಿ ಎಂದು ಕೂಗಾಡ್ತೀರಾ. ಹೀಗೆ ಮುಂದುವರಿಸಿದರೆ ಕಾಂಗ್ರೆಸ್ ನಾಮಾವಶೇಷ ಆಗುತ್ತದೆ’ ಎಂದು ಹೇಳಿದರು.</p>.<p>ಆರ್ಎಸ್ಎಸ್ ದೇಶದ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಂಘಟನೆ ಎಂದೂ ಯಡಿಯೂರಪ್ಪ ಹೇಳಿದರು.</p>.<p>ಸಭಾಧ್ಯಕ್ಷ ವಿಶ್ವೇಶ್ವರ ಹೆಗೆಡೆ ಕಾಗೇರಿ ಮಾತನಾಡಿ, ‘ಈ ಚರ್ಚೆಗೂ ಆರ್ಎಸ್ಎಸ್ಗೂ ಸಂಬಂಧ ಇಲ್ಲ. ಆ ಸಂಘಟನೆಯ ಬಗ್ಗೆ ಇಲ್ಲಿ ಚರ್ಚಿಸುವುದು ಅಪ್ರಸ್ತುತ’ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>