‘ಪ್ರಜಾವಾಣಿ’ಯ ಭಾನುವಾರದ ಸಂಚಿಕೆಯಲ್ಲಿ ಪ್ರಕಟವಾದ ‘ಶಿಕ್ಷಣ:ಲಂಚವೇ ‘ಭೂಷಣ‘! ವರದಿಯಲ್ಲಿರುವ ಕೆಲವು ಅಂಶಗಳಿಗೆ ಸ್ಪಷ್ಟನೆ ನೀಡಿರುವ ಅವರು, ‘ಖಾಸಗಿ ಶಾಲೆಗಳು ಇಲಾಖಾಧಿಕಾರಿಗಳ ಲಂಚಗುಳಿತನದ ಬಗ್ಗೆ ನನ್ನ ಗಮನಕ್ಕೆ ತಂದು ಪರಿಹಾರ ದೊರಕಿಸಬೇಕೆಂದು ಆಗ್ರಹಿಸಿದ್ದರು. ಆಗ ವಿವಿಧ ಇಲಾಖೆಗಳ ಮುಖ್ಯಸ್ಥರ, ಸಚಿವರ ಸಭೆ ನಡೆಸಿ, ಕೋವಿಡ್ನಂಥ ಪ್ರತಿಕೂಲ ಸಂದರ್ಭದಲ್ಲಿಯೂ ಏನು ಮಾಡಬಹುದೆಂದು ಚರ್ಚಿಸಿದ್ದೆ’ ಎಂದಿದ್ದಾರೆ.