ಬಜೆಟ್ ಮೇಲಿನ ಚರ್ಚೆಯಲ್ಲಿ ಭಾಗವಹಿಸಿದ್ದ ಅವರು, ‘ಯಂತ್ರೋಪಕರಣ ಖರೀದಿಗೆ ರೈತರಿಗೆ ಸಹಾಯಧನ ನೀಡುವ ಯೋಜನೆಗಳ ಮೂಲಕ ಸರ್ಕಾರದ ಹಣ ದಲ್ಲಾಳಿಗಳ ಪಾಲಾಗುತ್ತಿದೆ. ಇಂತಹ ಯಾವ ಯೋಜನೆಯೂ ರೈತರಿಗೆ ಬೇಕಿಲ್ಲ. ಈ ಎಲ್ಲ ಯೋಜನೆಗಳನ್ನು ರದ್ದು ಮಾಡಿ, ಪ್ರತಿ ಎಕರೆ ಜಮೀನಿನ ವ್ಯವಸಾಯದ ವೆಚ್ಚದ ಒಂದು ಪಾಲನ್ನು ರೈತರ ಖಾತೆಗೆ ವರ್ಗಾಯಿಸುವ ವ್ಯವಸ್ಥೆ ಆದರೆ ಅವರಿಗೆ ಶಕ್ತಿ ತುಂಬಲು ಸಾಧ್ಯ’ ಎಂದರು.