<p><strong>ಬೆಂಗಳೂರು</strong>: ರಾಜ್ಯದ ಎಲ್ಲಾ 65,911 ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮತ್ತು ಫ್ಯಾನ್ಗಳನ್ನು ಒದಗಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>33,164 ಅಂಗನವಾಡಿಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, 26,560 ಅಂಗನವಾಡಿಗಳಿಗೆ ಫ್ಯಾನ್ಗಳನ್ನು ಪೂರೈಸಲಾಗಿದೆ. 44,225 ಕೇಂದ್ರಗಳಲ್ಲಿ ಶೌಚಾಲಯ ಇದೆ ಎಂದು ಸರ್ಕಾರ ಮೆಮೊ ಸಲ್ಲಿಸಿತ್ತು.</p>.<p>ಇದನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈ ಅಂಕಿ–ಅಂಶಗಳು ಆಘಾತಕಾರಿ ಸ್ಥಿತಿಯನ್ನು ಚಿತ್ರಿಸುತ್ತವೆ’ ಎಂದು ಅಭಿಪ್ರಾಯಪಟ್ಟಿತು.</p>.<p>‘ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ಇರಬೇಕು. ಬಾಲಕರು, ಬಾಲಕಿಯರು ಮತ್ತು ಅಂಗವಿಕಲ ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಬೇಕು. ಈ ಶಿಫಾರಸನ್ನು ಸರ್ಕಾರ ಗಮನಿಸಬೇಕು’ ಎಂದು ಪೀಠ ಹೇಳಿತು.</p>.<p>‘ಕೊಳೆಗೇರಿಗಳಿಗೆ 100 ಮತ್ತು ನಗರ ಪ್ರದೇಶಕ್ಕೆ 350 ಅಂಗನವಾಡಿಗಳನ್ನು ಮಂಜೂರು ಮಾಡಲಾಗಿದೆ. ಹೆಚ್ಚುವರಿಯಾಗಿ ಇನ್ನೂ 4,244 ಅಂಗನವಾಡಿಗಳಿಗೆ ಬೇಡಿಕೆ ಇದೆ. ಸ್ವಚ್ಛ ಭಾರತ ಯೋಜನೆಯಡಿ 3,219 ಶೌಚಾಲಯಗಳನ್ನು ನಿರ್ಮಿಸಲಾಗಿದೆ’ ಎಂದು ಸರ್ಕಾರ ವಿವರಣೆ ಸಲ್ಲಿಸಿತು.</p>.<p>‘ಕೊಳೆಗೇರಿ ಮತ್ತು ಎಸ್ಸಿ/ಎಸ್ಟಿ ಜನಸಂಖ್ಯೆ ಹೆಚ್ಚಿರುವ ಅಂಗನವಾಡಿಗಳಲ್ಲಿ ಕುಡಿಯಲು ಶುದ್ಧ ಮತ್ತು ಬಿಸಿನೀರು ಪೂರೈಸಬೇಕು ಎಂಬ ಶಿಫಾರಸನ್ನು ಸರ್ಕಾರ ಪಾಲಿಸಿಲ್ಲ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>ಬೆಂಗಳೂರು ನಗರದಲ್ಲಿ ಹೆಚ್ಚಿನ ಸಂಖ್ಯೆಯ ಅಂಗವಾಡಿಗಳನ್ನು ತೆರೆಯ ಬೇಕು. ಈ ಎಲ್ಲಾ ನಿರ್ದೇಶನಗಳನ್ನು ಪಾಲಿಸಿರುವ ಸಂಬಂಧ ಅನುಸರಣಾ ಅಫಿಡವಿಟ್ ಸಲ್ಲಿಸುವಂತೆ ತಿಳಿಸಿದ ಪೀಠ, ವಿಚಾರಣೆಯನ್ನು ಜೂ.11ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದ ಎಲ್ಲಾ 65,911 ಅಂಗನವಾಡಿಗಳಿಗೆ ವಿದ್ಯುತ್ ಸಂಪರ್ಕ ಮತ್ತು ಫ್ಯಾನ್ಗಳನ್ನು ಒದಗಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.</p>.<p>33,164 ಅಂಗನವಾಡಿಗಳಿಗೆ ಮಾತ್ರ ವಿದ್ಯುತ್ ಸಂಪರ್ಕ, 26,560 ಅಂಗನವಾಡಿಗಳಿಗೆ ಫ್ಯಾನ್ಗಳನ್ನು ಪೂರೈಸಲಾಗಿದೆ. 44,225 ಕೇಂದ್ರಗಳಲ್ಲಿ ಶೌಚಾಲಯ ಇದೆ ಎಂದು ಸರ್ಕಾರ ಮೆಮೊ ಸಲ್ಲಿಸಿತ್ತು.</p>.<p>ಇದನ್ನು ಪರಿಶೀಲಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈ ಅಂಕಿ–ಅಂಶಗಳು ಆಘಾತಕಾರಿ ಸ್ಥಿತಿಯನ್ನು ಚಿತ್ರಿಸುತ್ತವೆ’ ಎಂದು ಅಭಿಪ್ರಾಯಪಟ್ಟಿತು.</p>.<p>‘ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ ಇರಬೇಕು. ಬಾಲಕರು, ಬಾಲಕಿಯರು ಮತ್ತು ಅಂಗವಿಕಲ ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ನಿರ್ಮಿಸಬೇಕು. ಈ ಶಿಫಾರಸನ್ನು ಸರ್ಕಾರ ಗಮನಿಸಬೇಕು’ ಎಂದು ಪೀಠ ಹೇಳಿತು.</p>.<p>‘ಕೊಳೆಗೇರಿಗಳಿಗೆ 100 ಮತ್ತು ನಗರ ಪ್ರದೇಶಕ್ಕೆ 350 ಅಂಗನವಾಡಿಗಳನ್ನು ಮಂಜೂರು ಮಾಡಲಾಗಿದೆ. ಹೆಚ್ಚುವರಿಯಾಗಿ ಇನ್ನೂ 4,244 ಅಂಗನವಾಡಿಗಳಿಗೆ ಬೇಡಿಕೆ ಇದೆ. ಸ್ವಚ್ಛ ಭಾರತ ಯೋಜನೆಯಡಿ 3,219 ಶೌಚಾಲಯಗಳನ್ನು ನಿರ್ಮಿಸಲಾಗಿದೆ’ ಎಂದು ಸರ್ಕಾರ ವಿವರಣೆ ಸಲ್ಲಿಸಿತು.</p>.<p>‘ಕೊಳೆಗೇರಿ ಮತ್ತು ಎಸ್ಸಿ/ಎಸ್ಟಿ ಜನಸಂಖ್ಯೆ ಹೆಚ್ಚಿರುವ ಅಂಗನವಾಡಿಗಳಲ್ಲಿ ಕುಡಿಯಲು ಶುದ್ಧ ಮತ್ತು ಬಿಸಿನೀರು ಪೂರೈಸಬೇಕು ಎಂಬ ಶಿಫಾರಸನ್ನು ಸರ್ಕಾರ ಪಾಲಿಸಿಲ್ಲ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.</p>.<p>ಬೆಂಗಳೂರು ನಗರದಲ್ಲಿ ಹೆಚ್ಚಿನ ಸಂಖ್ಯೆಯ ಅಂಗವಾಡಿಗಳನ್ನು ತೆರೆಯ ಬೇಕು. ಈ ಎಲ್ಲಾ ನಿರ್ದೇಶನಗಳನ್ನು ಪಾಲಿಸಿರುವ ಸಂಬಂಧ ಅನುಸರಣಾ ಅಫಿಡವಿಟ್ ಸಲ್ಲಿಸುವಂತೆ ತಿಳಿಸಿದ ಪೀಠ, ವಿಚಾರಣೆಯನ್ನು ಜೂ.11ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>