ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕೆಪಿಸಿಸಿ, ‘ಪಿಎಸ್ಐ ಪರೀಕ್ಷೆಯಲ್ಲಿ ಅಕ್ರಮವೇ ನಡೆದಿಲ್ಲ ಎಂದು ಗೃಹಸಚಿವರು ಸದನದಲ್ಲಿ ಪ್ರತಿಪಾದಿಸಿದ್ದರು. ಈಗ ನೇಮಕಾತಿಯನ್ನು ರದ್ದುಗೊಳಿಸಿ ಹಗರಣ ನಡೆದಿದ್ದು ನಿಜ ಎಂದು ಸರ್ಕಾರ ಒಪ್ಪಿಕೊಂಡಿದೆ. ಸಮರ್ಥನೆ ಮಾಡಿಕೊಂಡಿದ್ದ ಗೃಹಸಚಿವರೇ, ನೀವು ಇನ್ನೂ ಹುದ್ದೆಯಲ್ಲಿ ಮುಂದುವರಿಯಲು ಅರ್ಹರೇ? ಸಾರ್ವಜನಿಕ ಲಜ್ಜೆ ಎನ್ನುವುದು ನಿಮಗಿದ್ದರೆ ಕೂಡಲೇ ರಾಜೀನಾಮೆ ಕೊಟ್ಟುಬಿಡಿ’ ಎಂದು ಕಾಂಗ್ರೆಸ್ ಒತ್ತಾಯಿಸಿದೆ.