<p><strong>ಬೆಂಗಳೂರು: </strong>ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಮತ್ತು ಅವರ ಸ್ನೇಹಿತರಿಂದ ಈವರೆಗೆ ₹ 2.46 ಕೋಟಿ ಜಪ್ತಿ ಮಾಡಿದ್ದು, ಇದರ ಬಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ), ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.</p>.<p>ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಆರೋಪಿಗಳ ಮನೆ ಹಾಗೂ ಇತರೆಡೆ ಮೇಲಿಂದ ಮೇಲೆ ದಾಳಿ ಮಾಡುತ್ತಿದ್ದಾರೆ. ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಹೆಡ್ ಕಾನ್ಸ್ಟೆಬಲ್ ಶ್ರೀಧರ್ ಬಳಿ ₹ 2.16 ಕೋಟಿ ಸಿಕ್ಕಿದೆ. ಉಳಿದಂತೆ, ಮಧ್ಯವರ್ತಿ ಕೇಶವಮೂರ್ತಿ ಮನೆಯಲ್ಲಿ ₹ 30 ಲಕ್ಷ ಜಪ್ತಿ ಮಾಡಲಾಗಿದೆ.</p>.<p>‘ಪಿಎಸ್ಐ ಹುದ್ದೆಗೆ ಅಭ್ಯರ್ಥಿಗಳನ್ನು ಅಕ್ರಮವಾಗಿ ಆಯ್ಕೆ ಮಾಡಲು ನೇಮಕಾತಿ ವಿಭಾಗದ ನೌಕರರು ಹಾಗೂ ಇತರರು, ಲಕ್ಷಾಂತರ ರೂಪಾಯಿ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅವರು ಹಣದ ಬಗ್ಗೆ ಮಾಹಿತಿ ಬಾಯ್ಬಿಡುತ್ತಿದ್ದಾರೆ. ಅದರನ್ವಯ ದಾಳಿ ಮಾಡಿ, ನಗದು ಜಪ್ತಿ ಮಾಡಲಾಗುತ್ತಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.</p>.<p>‘ಸರ್ಕಾರಿ ನೌಕರರ ಬಳಿ ಕೋಟ್ಯಂತರ ರೂಪಾಯಿ ಸಿಗುತ್ತಿರುವುದು ಹಾಗೂ ಅಕ್ರಮದಲ್ಲಿ ಹಣದ ವ್ಯವಹಾರ ನಡೆದಿರುವುದರಿಂದ, ಜಾರಿ ನಿರ್ದೇಶನಾಲಯ ಮತ್ತು ಎಸಿಬಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ನಮ್ಮಿಂದಲೂ ಮಾಹಿತಿ ಕೋರಿದ್ದಾರೆ’ ಎಂದೂ ತಿಳಿಸಿವೆ.</p>.<p><strong>ಮತ್ತಷ್ಟು ಮಂದಿ ವಿಚಾರಣೆ:</strong> ‘ಪ್ರಕರಣದ ರೂವಾರಿ ಎನ್ನಲಾದ ಡಿವೈಎಸ್ಪಿ ಶಾಂತಕುಮಾರ್ ಹಾಗೂ ಪೊಲೀಸ್ ಪ್ರಧಾನ ಕಚೇರಿ ಸೂಪರಿಂಟೆಂಡೆಂಟ್ ಮಂಜುನಾಥ್ ವಿಚಾರಣೆ ಮುಂದುವರಿದಿದೆ. ಅಕ್ರಮದಲ್ಲಿ ಭಾಗಿಯಾಗಿದ್ದರು ಎನ್ನಲಾದ ಕೆಲವರ ಹೆಸರುಗಳನ್ನು ಅವರು ಬಾಯ್ಬಿಟ್ಟಿದ್ದಾರೆ. ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.</p>.<p>‘2011ರಿಂದಲೇ ಪಿಎಸ್ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಮಾಹಿತಿ ಇದೆ. ಸದ್ಯ 545 ಹುದ್ದೆಗಳ ನೇಮಕಾತಿ ಅಕ್ರಮದ ಬಗ್ಗೆ ತನಿಖೆ ನಡೆದಿದೆ. ಹಿರಿಯ ಅಧಿಕಾರಿಗಳ ಸಲಹೆ ಪಡೆದು ಉಳಿದ ನೇಮಕಾತಿ ಅಕ್ರಮ ಬಗ್ಗೆಯೂ ತನಿಖೆ ಆರಂಭಿಸಲಾಗುವುದು’ ಎಂದು ತಿಳಿಸಿವೆ.</p>.<p class="Subhead">ಜಾಮೀನು ಅರ್ಜಿ ವಜಾ: ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅಭ್ಯರ್ಥಿಗಳಾದ ರಚನಾ ಹನುಮಂತ ಹಾಗೂ ಎಸ್. ಜಾಗೃತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಬಂಧಿತ ಆರೋಪಿಗಳು ಮತ್ತು ಅವರ ಸ್ನೇಹಿತರಿಂದ ಈವರೆಗೆ ₹ 2.46 ಕೋಟಿ ಜಪ್ತಿ ಮಾಡಿದ್ದು, ಇದರ ಬಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ), ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.</p>.<p>ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ಅಧಿಕಾರಿಗಳು, ಆರೋಪಿಗಳ ಮನೆ ಹಾಗೂ ಇತರೆಡೆ ಮೇಲಿಂದ ಮೇಲೆ ದಾಳಿ ಮಾಡುತ್ತಿದ್ದಾರೆ. ಪೊಲೀಸ್ ನೇಮಕಾತಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಹೆಡ್ ಕಾನ್ಸ್ಟೆಬಲ್ ಶ್ರೀಧರ್ ಬಳಿ ₹ 2.16 ಕೋಟಿ ಸಿಕ್ಕಿದೆ. ಉಳಿದಂತೆ, ಮಧ್ಯವರ್ತಿ ಕೇಶವಮೂರ್ತಿ ಮನೆಯಲ್ಲಿ ₹ 30 ಲಕ್ಷ ಜಪ್ತಿ ಮಾಡಲಾಗಿದೆ.</p>.<p>‘ಪಿಎಸ್ಐ ಹುದ್ದೆಗೆ ಅಭ್ಯರ್ಥಿಗಳನ್ನು ಅಕ್ರಮವಾಗಿ ಆಯ್ಕೆ ಮಾಡಲು ನೇಮಕಾತಿ ವಿಭಾಗದ ನೌಕರರು ಹಾಗೂ ಇತರರು, ಲಕ್ಷಾಂತರ ರೂಪಾಯಿ ಪಡೆದುಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಅವರು ಹಣದ ಬಗ್ಗೆ ಮಾಹಿತಿ ಬಾಯ್ಬಿಡುತ್ತಿದ್ದಾರೆ. ಅದರನ್ವಯ ದಾಳಿ ಮಾಡಿ, ನಗದು ಜಪ್ತಿ ಮಾಡಲಾಗುತ್ತಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.</p>.<p>‘ಸರ್ಕಾರಿ ನೌಕರರ ಬಳಿ ಕೋಟ್ಯಂತರ ರೂಪಾಯಿ ಸಿಗುತ್ತಿರುವುದು ಹಾಗೂ ಅಕ್ರಮದಲ್ಲಿ ಹಣದ ವ್ಯವಹಾರ ನಡೆದಿರುವುದರಿಂದ, ಜಾರಿ ನಿರ್ದೇಶನಾಲಯ ಮತ್ತು ಎಸಿಬಿ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ನಮ್ಮಿಂದಲೂ ಮಾಹಿತಿ ಕೋರಿದ್ದಾರೆ’ ಎಂದೂ ತಿಳಿಸಿವೆ.</p>.<p><strong>ಮತ್ತಷ್ಟು ಮಂದಿ ವಿಚಾರಣೆ:</strong> ‘ಪ್ರಕರಣದ ರೂವಾರಿ ಎನ್ನಲಾದ ಡಿವೈಎಸ್ಪಿ ಶಾಂತಕುಮಾರ್ ಹಾಗೂ ಪೊಲೀಸ್ ಪ್ರಧಾನ ಕಚೇರಿ ಸೂಪರಿಂಟೆಂಡೆಂಟ್ ಮಂಜುನಾಥ್ ವಿಚಾರಣೆ ಮುಂದುವರಿದಿದೆ. ಅಕ್ರಮದಲ್ಲಿ ಭಾಗಿಯಾಗಿದ್ದರು ಎನ್ನಲಾದ ಕೆಲವರ ಹೆಸರುಗಳನ್ನು ಅವರು ಬಾಯ್ಬಿಟ್ಟಿದ್ದಾರೆ. ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.</p>.<p>‘2011ರಿಂದಲೇ ಪಿಎಸ್ಐ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಮಾಹಿತಿ ಇದೆ. ಸದ್ಯ 545 ಹುದ್ದೆಗಳ ನೇಮಕಾತಿ ಅಕ್ರಮದ ಬಗ್ಗೆ ತನಿಖೆ ನಡೆದಿದೆ. ಹಿರಿಯ ಅಧಿಕಾರಿಗಳ ಸಲಹೆ ಪಡೆದು ಉಳಿದ ನೇಮಕಾತಿ ಅಕ್ರಮ ಬಗ್ಗೆಯೂ ತನಿಖೆ ಆರಂಭಿಸಲಾಗುವುದು’ ಎಂದು ತಿಳಿಸಿವೆ.</p>.<p class="Subhead">ಜಾಮೀನು ಅರ್ಜಿ ವಜಾ: ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅಭ್ಯರ್ಥಿಗಳಾದ ರಚನಾ ಹನುಮಂತ ಹಾಗೂ ಎಸ್. ಜಾಗೃತ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>