ಬೆಂಗಳೂರು ನಗರ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದನ್ಯಾಯಾಧೀಶ ಯಶವಂತ ಕುಮಾರ್ ಅವರು ಮಂಗಳ ವಾರ ಪೌಲ್ ಅವರ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿದರು. ‘ಗಂಭೀರ ಸ್ವರೂಪದ ಈ ಪ್ರಕರಣ ಇನ್ನೂ ತನಿಖಾ ಹಂತದಲ್ಲಿರುವಾಗ ಜಾಮೀನು ನೀಡುವುದು ಉಚಿತವಲ್ಲ’ ಎಂಬ ಪ್ರಾಸಿಕ್ಯೂಷನ್ ಪರ ವಕೀಲ ಪಿ.ಪ್ರಸನ್ನ ಕುಮಾರ್ ಅವರ ವಾದವನ್ನು ನ್ಯಾಯಾಧೀಶರು ಮನ್ನಿಸಿದ್ದಾರೆ.