<p><strong>ಕಲಬುರಗಿ:</strong> ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು, ಶುಕ್ರವಾರ ಮತ್ತೆ ಇಬ್ಬರನ್ನು ವಶಕ್ಕೆ ಪಡೆದರು.</p>.<p>ನಗರದ ನಿವಾಸಿ ವಿಶಾಲ್ ಶಿರೂರ ಎಂಬ ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆಯ ನಡೆಸಲಾಗುತ್ತಿದೆ. ಹಗರಣದ ಕೇಂದ್ರಸ್ಧಾನವಾದ ಇಲ್ಲಿನ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿನ ಕೇಂದ್ರದಲ್ಲೇ ಈತ ಕೂಡ ಪರೀಕ್ಷೆ ಬರೆದಿದ್ದಾನೆ ಎಂದು ಸಿಐಡಿ ಮೂಲಗಳು 'ಪ್ರಜಾವಾಣಿ'ಗೆ ತಿಳಿಸಿವೆ.</p>.<p>ವಿಶಾಲ್ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ ಅನುಮಾನವಿದ್ದು, ಇದರೊಂದಿಗೆ ಹಗರಣ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/psi-exam-cid-enquiry-930263.html " target="_blank">ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿ ಎದುರು ಅಭ್ಯರ್ಥಿಗಳು ಹಾಜರು </a></p>.<p>ಇಷ್ಟು ದಿನ ಒಎಂಆರ್ ಶೀಟಿನಲ್ಲಿ ಅಕ್ರಮ ನಡೆಸಿದ ಬಗ್ಗೆಯೇ ಜಾಲಾಡುತ್ತಿದ್ದ ಅಧಿಕಾರಿಗಳು, ಈಗತನಿಖೆಯಲ್ಲಿ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ.</p>.<p>ಪರೀಕ್ಷಾ ಕೇಂದ್ರದ ಒಳಗೆ ಎಲೆಕ್ಟ್ರಾನಿಕ್ ಉಪಕರಣ ಬಳಸಿದ ವಿಷಯ ಹೊರಬಿದ್ದ ತಕ್ಷಣ ತನಿಖೆಯನ್ನು ಮತ್ತಷ್ಟು ಆಯಾಮಗಳಲ್ಲಿ ಚುರುಕುಗೊಳಿಸಿದ್ದಾರೆ.</p>.<p><strong>ಡೀಲ್ ಮಾಡಿದವನೂ ವಶಕ್ಕೆ: </strong>ಗುರುವಾರ ಬಂಧಿಸಲಾದ ಶಾಸಕ ಎಂ.ವೈ.ಪಾಟೀಲ ಅವರ ಗನ್ಮ್ಯಾನ್ ಹಯ್ಯಾಳಿ ದೇಸಾಯಿ ಎಂಬಾತನಿಗೆ ಅಕ್ರಮ ನಡೆಸಲುಸಹಾಯ ಮಾಡಿದ ಆರೋಪದ ಮೇಲೆ ಅಫಜಲಪುರದ ಶರಣಬಸಪ್ಪ ಎಂಬಾತನನ್ನೂ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.</p>.<p>ಇಬ್ಬರನ್ನೂ ಶುಕ್ರವಾರ ನಸುಕಿನಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಮಧ್ಯಾಹ್ನ ಬಂಧಿಸಿ ಕೋರ್ಟಿಗೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದೂ ಮೂಲಗಳು ಮಾಹಿತಿ ನೀಡಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/kalaburagi/psi-illegal-recruitment-two-held-including-mlas-gunman-930324.html" target="_blank">ಪಿಎಸ್ಐ ಅಕ್ರಮ ನೇಮಕಾತಿ; ಶಾಸಕರ ಗನ್ ಮ್ಯಾನ್ ಸೇರಿ ಮತ್ತೆ ಇಬ್ಬರ ಬಂಧನ </a></p>.<p>ಈ ಇಬ್ಬರ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.</p>.<p>ಗುರುವಾರ ಬಂಧಿಸಲಾದ ಗನ್ಮ್ಯಾನ್ ಹಯ್ಯಾಳಿ ಹಾಗೂ ಸಿಎಆರ್ ಪೊಲೀಸ್ ಕಾನ್ಸ್ಟೆಬಲ್ ರುದ್ರಗೌಡ ಪಾಟೀಲ ಅವರನ್ನು ಶುಕ್ರವಾರ ನ್ಯಾಯಾಧೀಶರ ಮುಂದೆ ಹಾಜರು ಮಾಡಲಾಗಿದೆ.</p>.<p><strong>ಓದಿ...<a href="https://www.prajavani.net/karnataka-news/psi-recruitment-scam-afzalpur-block-congress-president-mahantesh-patil-arrested-by-cid-police-930635.html" target="_blank">ಪಿಎಸ್ಐ ನೇಮಕಾತಿ ಅಕ್ರಮ: ಅಫಜಲಪುರಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಬಂಧನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರಗಿ:</strong> ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು, ಶುಕ್ರವಾರ ಮತ್ತೆ ಇಬ್ಬರನ್ನು ವಶಕ್ಕೆ ಪಡೆದರು.</p>.<p>ನಗರದ ನಿವಾಸಿ ವಿಶಾಲ್ ಶಿರೂರ ಎಂಬ ಅಭ್ಯರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆಯ ನಡೆಸಲಾಗುತ್ತಿದೆ. ಹಗರಣದ ಕೇಂದ್ರಸ್ಧಾನವಾದ ಇಲ್ಲಿನ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿನ ಕೇಂದ್ರದಲ್ಲೇ ಈತ ಕೂಡ ಪರೀಕ್ಷೆ ಬರೆದಿದ್ದಾನೆ ಎಂದು ಸಿಐಡಿ ಮೂಲಗಳು 'ಪ್ರಜಾವಾಣಿ'ಗೆ ತಿಳಿಸಿವೆ.</p>.<p>ವಿಶಾಲ್ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿದ ಅನುಮಾನವಿದ್ದು, ಇದರೊಂದಿಗೆ ಹಗರಣ ಮತ್ತೊಂದು ಮಹತ್ವದ ತಿರುವು ಪಡೆದುಕೊಂಡಿದೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/karnataka-news/psi-exam-cid-enquiry-930263.html " target="_blank">ಪಿಎಸ್ಐ ನೇಮಕಾತಿ ಅಕ್ರಮ: ಸಿಐಡಿ ಎದುರು ಅಭ್ಯರ್ಥಿಗಳು ಹಾಜರು </a></p>.<p>ಇಷ್ಟು ದಿನ ಒಎಂಆರ್ ಶೀಟಿನಲ್ಲಿ ಅಕ್ರಮ ನಡೆಸಿದ ಬಗ್ಗೆಯೇ ಜಾಲಾಡುತ್ತಿದ್ದ ಅಧಿಕಾರಿಗಳು, ಈಗತನಿಖೆಯಲ್ಲಿ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ.</p>.<p>ಪರೀಕ್ಷಾ ಕೇಂದ್ರದ ಒಳಗೆ ಎಲೆಕ್ಟ್ರಾನಿಕ್ ಉಪಕರಣ ಬಳಸಿದ ವಿಷಯ ಹೊರಬಿದ್ದ ತಕ್ಷಣ ತನಿಖೆಯನ್ನು ಮತ್ತಷ್ಟು ಆಯಾಮಗಳಲ್ಲಿ ಚುರುಕುಗೊಳಿಸಿದ್ದಾರೆ.</p>.<p><strong>ಡೀಲ್ ಮಾಡಿದವನೂ ವಶಕ್ಕೆ: </strong>ಗುರುವಾರ ಬಂಧಿಸಲಾದ ಶಾಸಕ ಎಂ.ವೈ.ಪಾಟೀಲ ಅವರ ಗನ್ಮ್ಯಾನ್ ಹಯ್ಯಾಳಿ ದೇಸಾಯಿ ಎಂಬಾತನಿಗೆ ಅಕ್ರಮ ನಡೆಸಲುಸಹಾಯ ಮಾಡಿದ ಆರೋಪದ ಮೇಲೆ ಅಫಜಲಪುರದ ಶರಣಬಸಪ್ಪ ಎಂಬಾತನನ್ನೂ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ.</p>.<p>ಇಬ್ಬರನ್ನೂ ಶುಕ್ರವಾರ ನಸುಕಿನಲ್ಲಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಮಧ್ಯಾಹ್ನ ಬಂಧಿಸಿ ಕೋರ್ಟಿಗೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದೂ ಮೂಲಗಳು ಮಾಹಿತಿ ನೀಡಿವೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/district/kalaburagi/psi-illegal-recruitment-two-held-including-mlas-gunman-930324.html" target="_blank">ಪಿಎಸ್ಐ ಅಕ್ರಮ ನೇಮಕಾತಿ; ಶಾಸಕರ ಗನ್ ಮ್ಯಾನ್ ಸೇರಿ ಮತ್ತೆ ಇಬ್ಬರ ಬಂಧನ </a></p>.<p>ಈ ಇಬ್ಬರ ಬಂಧನದೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.</p>.<p>ಗುರುವಾರ ಬಂಧಿಸಲಾದ ಗನ್ಮ್ಯಾನ್ ಹಯ್ಯಾಳಿ ಹಾಗೂ ಸಿಎಆರ್ ಪೊಲೀಸ್ ಕಾನ್ಸ್ಟೆಬಲ್ ರುದ್ರಗೌಡ ಪಾಟೀಲ ಅವರನ್ನು ಶುಕ್ರವಾರ ನ್ಯಾಯಾಧೀಶರ ಮುಂದೆ ಹಾಜರು ಮಾಡಲಾಗಿದೆ.</p>.<p><strong>ಓದಿ...<a href="https://www.prajavani.net/karnataka-news/psi-recruitment-scam-afzalpur-block-congress-president-mahantesh-patil-arrested-by-cid-police-930635.html" target="_blank">ಪಿಎಸ್ಐ ನೇಮಕಾತಿ ಅಕ್ರಮ: ಅಫಜಲಪುರಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಬಂಧನ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>