‘ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಬಿಜೆಪಿಯ ಹಲವು ಪ್ರಭಾವಿಗಳು ಅಕ್ರಮದಲ್ಲಿ ಶಾಮೀಲಾಗಿದ್ದಾರೆ. ತನಿಖೆ ಆರಂಭವಾಗಿ ಹಲವು ದಿನಗಳಾದರೂ ಮಧ್ಯಂತರ ವರದಿ ಸಲ್ಲಿಸಲು ಸಿಐಡಿಗೆ ಸಾಧ್ಯವಾಗಿಲ್ಲ. ಕಲಬುರಗಿ ಮಾತ್ರವಲ್ಲ, ಬೆಂಗಳೂರು ಪರೀಕ್ಷಾ ಕೇಂದ್ರಗಳಲ್ಲೂ ಅಕ್ರಮ ನಡೆದಿರುವ ಆರೋಪಗಳಿವೆ. ನೇರವಾಗಿ ಸರ್ಕಾರದ ನಿಯಂತ್ರಣದಲ್ಲೇ ಇರುವ ಸಿಐಡಿ ಪೊಲೀಸರು ಸರಿಯಾಗಿ ತನಿಖೆ ನಡೆಸುತ್ತಾರೆಯೆ’ ಎಂದು ಕೇಳಿದ್ದಾರೆ.