ಕಲಬುರಗಿಯ ಎಂ.ಎಸ್. ಇರಾನಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿ ಪ್ರಭು ಶರಣಪ್ಪ ಎಂಬುವವರಿಗೆ ಬ್ಲೂಟೂತ್ ಮೂಲಕ ಉತ್ತರ ತಲುಪಿಸಿದ ಆರೋಪದ ಮೇರೆಗೆ ಪಾಟೀಲ ವಿರುದ್ಧ ನಗರದ ಸ್ಟೇಶನ್ ಬಜಾರ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಹೀಗಾಗಿ, ಮತ್ತೊಮ್ಮೆ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಇದಕ್ಕೂ ಮೊದಲು ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಪರೀಕ್ಷಾಕೇಂದ್ರದಲ್ಲಿ ಹಲವು ಅಭ್ಯರ್ಥಿಗಳಿಗೆ ಅಕ್ರಮ ಮಾರ್ಗದ ಮೂಲಕ ಉತ್ತರ ತಲುಪಿಸಿದ ಆರೋಪದ ಮೇರೆಗೆ ಆರ್.ಡಿ. ಪಾಟೀಲ ಬಂಧನವಾಗಿತ್ತು.