‘ಹೇಗಾದರೂ ಮಾಡಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆಂಬ ಆಸೆಯಿಂದ ಹಲವು ಅಭ್ಯರ್ಥಿಗಳು ಮಧ್ಯವರ್ತಿಗಳ ಮೂಲಕ ನೇಮಕಾತಿ ವಿಭಾಗದ ಅಧಿಕಾರಿಗಳಿಗೆ ಲಕ್ಷಾಂತರ ಮೊತ್ತ ಸಂದಾಯ ಮಾಡಿದ್ದಾರೆ. ವಿಚಾರಣೆ ವೇಳೆ ಹಲವರು ಈ ಕುರಿತ ಮಾಹಿತಿ ಬಹಿರಂಗಪಡಿಸಿದ್ದಾರೆ. ಅವರು ಸಂಪರ್ಕಿಸಿದ ವ್ಯಕ್ತಿಗಳು ಯಾರು. ಅವರಿಗೆ ನೀಡಿರುವ ಮೊತ್ತ ಎಷ್ಟು. ಎಷ್ಟು ಕಂತಿನಲ್ಲಿ ಹಣ ಸಂದಾಯ ಮಾಡಿದ್ದಾರೆ. ಅವರ ನಡುವೆ ಯಾವ ಬಗೆಯ ಒಪ್ಪಂದವಾಗಿತ್ತು ಎಂಬ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.