ಬೆಂಗಳೂರು: ‘ನಿರುದ್ಯೋಗಿಗಳ ಭವಿಷ್ಯದ ವಿಚಾರದಲ್ಲಿ ಚೆಲ್ಲಾಟ ಆಡಬಾರದು ಎಂಬ ಉದ್ದೇಶ ನಮ್ಮದು. ಹೀಗಾಗಿ, ಪಿಎಸ್ಐ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿ ಬಂದ ತಕ್ಷಣ ತನಿಖೆಗೆ ಆದೇಶಿಸಲಾಗಿದೆ.ಮುಖ್ಯಮಂತ್ರಿ ಸಮರ್ಥರಿದ್ದು, ಉಪ್ಪು ತಿಂದವರು ನೀರು ಕುಡಿಯಲಿದ್ದಾರೆ’ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.