ಬೆಂಗಳೂರು: ಸಿಐಡಿ ಅಧಿಕಾರಿಗಳ ವರ್ತನೆ ಬಗ್ಗೆ ನ್ಯಾಯಾಲಯದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಬಂಧಿತ ಅಭ್ಯರ್ಥಿಗಳು, ‘ವಿಚಾರಣೆ ನೆಪದಲ್ಲಿ ಸಾಕಷ್ಟು ತೊಂದರೆ ನೀಡಿದ್ದಾರೆ’ ಎಂದು ದೂರಿದರು.
‘ಸಂಬಂಧವಿಲ್ಲದ ಪ್ರಶ್ನೆಗಳನ್ನು ಕೇಳಿದ್ದಾರೆ. ಬಿಳಿ ಹಾಳೆ ಮೇಲೆ ಸಹಿ ಮಾಡಿಸಿಕೊಂಡಿದ್ದಾರೆ’ ಎಂದೂ ಆರೋಪಿಸಿದರು. ಅಭ್ಯರ್ಥಿಗಳ ದೂರು ಆಲಿಸಿದ ನ್ಯಾಯಾಧೀಶರು, ಸಿಐಡಿ ಅಧಿಕಾರಿಗಳನ್ನು ವಿಚಾರಿಸಿ ಮಾಹಿತಿ ಪಡೆದುಕೊಂಡರು. ನಂತರವೇ ಅಭ್ಯರ್ಥಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಿದರು.