ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆಗೆ ಗೈರುಹಾಜರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸೋಮವಾರ ನಡೆದ ಅರ್ಥಶಾಸ್ತ್ರ ವಿಷಯಕ್ಕೆ 28 ಸಾವಿರ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.
ಈ ಬಾರಿ ಒಟ್ಟು 4,12,593 ವಿದ್ಯಾರ್ಥಿಗಳು ಅರ್ಥಶಾಸ್ತ್ರ ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು.
ಗೈರು ಹಾಜರಾದವರಲ್ಲಿ 20,147 ಹೊಸಬರು, 5,956 ಖಾಸಗಿ ಅಭ್ಯರ್ಥಿಗಳು ಮತ್ತು 2019 ಪುನರಾವರ್ತಿತ ಅಭ್ಯರ್ಥಿಗಳು ಸೇರಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ 1,642, ಮೈಸೂರಿನಲ್ಲಿ 1,115, ಚಿತ್ರದುರ್ಗದಲ್ಲಿ 1,076 ಮತ್ತು ಬೆಂಗಳೂರು ದಕ್ಷಿಣದಲ್ಲಿ 1,001 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ.