‘ವಿಧಾನಸಭೆಯ ಈ ಹಿಂದಿನ ಸ್ಪೀಕರ್ ಅವರು 17 ಶಾಸಕರನ್ನು ಅನರ್ಹಗೊಳಿಸಿದ್ದವರಲ್ಲಿ ಈ ಮೂವರು ಸೇರಿದ್ದರು. ಅನರ್ಹತೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ‘ಆಯ್ಕೆ’, ‘ಮರು ಆಯ್ಕೆ’ ಮತ್ತು ‘ನಾಮಕರಣ’ ಪದಗಳ ಕುರಿತು ವ್ಯಾಪಕ ಚರ್ಚೆ ನಡೆಸಿತ್ತು. ಚುನಾವಣೆಯಲ್ಲಿ ಮರು ಆಯ್ಕೆಯಾಗದ ಹೊರತು ಯಾವುದೇ ಸಾಂವಿಧಾನಿಕ ಹುದ್ದೆ ಅಲಂಕರಿಸಲು ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.