ಪ್ರಕಾಶಕರ ಸಂಘದ ಪದಾಧಿಕಾರಿ ಸೃಷ್ಟಿ ನಾಗೇಶ್,ಮುಖ್ಯಕಾರ್ಯದರ್ಶಿ, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯಮಂತ್ರಿ ದರ ಏರಿಕೆಗೆ ಒಪ್ಪಿಗೆ ನೀಡಿ ಸಹಿ ಹಾಕಿದ್ದಾರೆ. ಕಷ್ಟಪಟ್ಟು ಒಪ್ಪಿಸಿ 30 ಪೈಸೆ ಹೆಚ್ಚಿಸಿಕೊಳ್ಳಲಾಗಿದೆ. ಆದರೆ, ಕಡತವನ್ನು ತಮ್ಮ ಬಳಿ ಇಟ್ಟುಕೊಂಡಿರುವ ಅಧಿಕಾರಿಯನ್ನು ಹಲವು ಬಾರಿ ಭೇಟಿ ಮಾಡಿ, ಮಾತನಾಡಿದ್ದೇವೆ. ಆದರೆ ಯಾವುದೇ ಪ್ರಯೋಜನ ಆಗುತ್ತಿಲ್ಲ. ಮುಖ್ಯಮಂತ್ರಿಯವರೇ ಮಧ್ಯ ಪ್ರವೇಶಿಸಬೇಕು ಎಂದು ತಿಳಿಸಿದರು.