‘ರಾಜ್ಯದ ದ್ವಿತೀಯ ಪಿಯು ಫಲಿತಾಂಶವನ್ನು ಕೇಂದ್ರೀಯ ಮಂಡಳಿಗಳ ಫಲಿತಾಂಶಗಳೊಂದಿಗೆ ಹೋಲಿಸಿದಾಗ ರಾಜ್ಯದ ವಿದ್ಯಾರ್ಥಿಗಳ ಉತ್ತೀರ್ಣ ಪ್ರಮಾಣ ಮತ್ತು ಅಂಕಗಳ ಸಾಮರ್ಥ್ಯ ಕಡಿಮೆಯಾಗುತ್ತಿದೆ. ವೃತ್ತಿ ಪರ ಕೋರ್ಸ್ಗಳ ಸೀಟುಗಳಿಗಾಗಿ ಸಿಬಿಎಸ್ಇ ವಿದ್ಯಾರ್ಥಿಗಳ ಜತೆ ಸ್ಪರ್ಧಿಸುವ ಸವಾಲನ್ನು ಎದುರಿಸುತ್ತಿ ದ್ದಾರೆ. ಹಾಗಾಗಿ, ಉತ್ತೀರ್ಣತೆಯ ಶೇಕಡಾವಾರು ಪ್ರಮಾಣ ಸುಧಾರಿಸಲು ಪ್ರಥಮ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ಈ ಪದ್ಧತಿ ಅಳವಡಿಸಿಕೊಳ್ಳಬಹುದು’ ಎಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳು ಸಲಹೆ ನೀಡಿದ್ದಾರೆ.