‘ಕೋವಿಡ್ ಕಾರಣದಿಂದ ದ್ವಿತೀಯಪಿಯುಸಿ ವಾರ್ಷಿಕ ಪರೀಕ್ಷೆಯನ್ನು ನಡೆಸಲು ಸಾಧ್ಯ ಆಗಿಲ್ಲ. ಹೀಗಾಗಿ, ಎಸ್ಸೆಸ್ಸೆಲ್ಸಿ, ಪ್ರಥಮ ಪಿಯುಸಿ ಮತ್ತು ಶೈಕ್ಷಣಿಕ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳ ಆಧಾರದಲ್ಲಿ ಫಲಿತಾಂಶ ನೀಡಲಾಗಿತ್ತು. ಈ ಫಲಿತಾಂಶದಿಂದ ತೃಪ್ತಿ ಇಲ್ಲದವರು ತಿರಸ್ಕರಿಸಿ, ಹೊಸ ವಿದ್ಯಾರ್ಥಿಗಳಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು. ಫಲಿತಾಂಶ ತಿರಸ್ಕರಿಸಿದ ಬಳಿಕ ಹೊಸತಾಗಿ ಪರೀಕ್ಷೆ ಬರೆಯಬೇಕು. ಹಿಂದಿನ ಫಲಿತಾಂಶ ಉಳಿಸಿಕೊಳ್ಳಲು ಅವಕಾಶ ಇಲ್ಲ ಎಂದು ಅಧಿಸೂಚನೆಯಲ್ಲೇ ತಿಳಿಸಲಾಗಿತ್ತು’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.