‘ಪುನೀತ್ ಕುಟುಂಬದವರು ಅಜಾತಶತ್ರುಗಳು. ಅವರಲ್ಲಿ ಸಾಮಾಜಿಕ ಕಳಕಳಿ, ಬದ್ಧತೆ ಇದೆ. ಸರ್ಕಾರದ ಕಾರ್ಯಕ್ರಮಗಳಿಗೆ ಯಾವುದೇ ಹಣ ಪಡೆಯದೆ ರಾಯಭಾರಿಯಾಗಿ ಅವರು ಕೆಲಸ ಮಾಡಿದ್ದರು. ನನ್ನ ಚಿತ್ರಮಂದಿರಗಳ ಸಮೂಹದ ಅನಾವರಣಕ್ಕೆ ಬರಬೇಕು ಎಂದು ಇತ್ತೀಚೆಗೆ ಅವರನ್ನು ಆಹ್ವಾನಿಸಿದ್ದೆ. ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡರೆ ಮನಸ್ಸಿಗೆ ತೀವ್ರ ನೋವಾಗುತ್ತದೆ. ಭಗವಂತ ಎಷ್ಟು ಕ್ರೂರಿ ಎಂಬುದಕ್ಕೆ ಪುನೀತ್ ನಿಧನ ಸಾಕ್ಷಿ’ ಎಂದು ಭಾವುಕರಾದರು.