ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಷಿಯವರು ನನ್ನ ಮೇಲೆ ಮಾಡಿದ ಆರೋಪಗಳನ್ನು ಗಮನಿಸಿದೆ. ಪರಿಷತ್ತಿನ ಕಾರ್ಯ ವಿಧಾನಗಳ ಬಗ್ಗೆ ನಾನು ಅಸಮಾಧಾನ ಸೂಚಿಸಿದ್ದು ನಿಜ. ಹಾವೇರಿ ಸಮ್ಮೇಳನದಲ್ಲಿ ಎಲ್ಲ ವರ್ಗಗಳಿಗೆ ಸರಿಯಾದ ಪ್ರಾತಿನಿಧ್ಯ ದೊರಕಿಲ್ಲ ಎಂಬ ಅನೇಕರ ಮಾತಿಗೆ ನಾನೂ ಧನಿಗೂಡಿಸಿದ್ದೇನೆ. ಇದು ಪ್ರಜಾಪ್ರಭುತ್ವ ನನಗೆ ತಂದುಕೊಟ್ಟ ಹಕ್ಕು, ಮತ್ತು ಹೀಗೆ ಬರೆಯುವುದು ನನ್ನ ಕರ್ತವ್ಯ ಎಂದು ನಾನು ನಂಬಿದ್ದೇನೆ. ಇದರ ಹೊರತಾಗಿ ನಾನು ಜೋಷಿಯವರ ಸಹಿತವಾಗಿ ಯಾರ ವೈಯಕ್ತಿಕ ವಿಚಾರಗಳ ಬಗ್ಗೆಯೂ ಬರೆದಿಲ್ಲ. ಅವರು ಹಾವೇರಿ ಸಮ್ಮೇಳನಕ್ಕೆ ನನ್ನನ್ನು ಕರೆದಿದ್ದರು. ನನ್ನದೇ ಕಾರಣಗಳಿಗಾಗಿ ಬರಲಾಗುವುದಿಲ್ಲ ಎಂದು ಹೇಳಿದ್ದೇನೆ. ಅದಕ್ಕೆ ಅವರು ಇಷ್ಟೊಂದು ಆರೋಪಗಳನ್ನು ಮಾಡುವ ಅಗತ್ಯ ಇರಲಿಲ್ಲ ಎಂದು ಬಿಳಿಮಲೆ ಹೇಳಿದ್ದಾರೆ.