‘ಡಾ.ಎಂ.ಎಂ.ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಯನ್ನು ವಿಮರ್ಶಕ ಹಾಗೂ ವಿದ್ವಾಂಸ ಡಾ. ಬಸವರಾಜ ಕಲ್ಗುಡಿ ಅವರಿಗೆ ನೀಡಿ ಗೌರವಿಸಲಾಯಿತು. ‘ಅತ್ಯುತ್ತಮ ಪ್ರಕಾಶನ ಪ್ರಶಸ್ತಿ’ಯನ್ನು ಐಬಿಎಚ್ ಪ್ರಕಾಶನದ ಎಚ್.ಕೆ. ಲಕ್ಷ್ಮೀನಾರಾಯಣ ಅಡಿಗ, ‘ಡಾ.ಜಿ.ಪಿ.ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ’ಯನ್ನು ಸಿಂಧಗಿಯ ಎಂ.ಎನ್. ಪಡಶೆಟ್ಟಿ ಹಾಗೂ ಬೆಂಗಳೂರಿನ ಕೆ. ರಾಜಕುಮಾರ್, ‘ಡಾ.ಅನುಪಮಾ ನಿರಂಜನ ವೈದ್ಯಕೀಯ ಹಾಗೂ ವಿಜ್ಞಾನ ಸಾಹಿತ್ಯ ಪ್ರಶಸ್ತಿ’ಯನ್ನು ಡಾ.ಬಿ.ಎಂ. ಹೆಗ್ಡೆ ಅವರಿಗೆ ಪ್ರದಾನ ಮಾಡಲಾಯಿತು.