ನಾಮಪತ್ರ ಸಲ್ಲಿಕೆಯ ಬಳಿಕ ಪುಟ್ಟಣ್ಣ ಅವರು ಮಾತನಾಡಿ, ‘ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಶಕ್ತಿಶಾಲಿಯಾಗಿದೆ. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿರುವುದರಿಂದ ನನ್ನನ್ನು ಪುನರಾಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಎದುರಾಳಿ ಅಭ್ಯರ್ಥಿಗಳ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ. ನಾನು ಮಾಡಿರುವ ಕೆಲಸಗಳೇ ನನಗೆ ಶ್ರೀರಕ್ಷೆಯಾಗಲಿವೆ’ ಎಂದು ಹೇಳಿದರು.